LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕೃಷಿ ಪರಿಕರಗಳ ವಿತರಕರ ಮತ್ತು ಮಾರಾಟಗಾರರ ಸಭೆ

Advertisement
ಸಿರುಗುಪ್ಪ : ನಗರದ ಸಿಡಿಪಿಓ ಕಛೇರಿಯ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ, ಕೃಷಿ ಇಲಾಖೆಗಳ ಸಹಯೋಗದಲ್ಲಿ ಗುಣ ನಿಯಂತ್ರಣ ಕಾರ್ಯಕ್ರಮದಡಿ ಕೃಷಿ ಪರಿಕರ ಮತ್ತು ಮಾರಾಟಗಾರರ ಸಭೆ ನಡೆಯಿತು.
ಕೃಷಿ ಉಪನಿರ್ದೇಶಕ ಮಂಜುನಾಥ ಅವರು ಮಾತನಾಡಿ ರೈತರ ಪ್ರಗತಿಗೆ ಕೃಷಿ ಇಲಾಖೆ ಹಾಗೂ ಕೃಷಿ ಪರಿಕರಗಳ ಮಾರಾಟಗಾರರ ಪಾತ್ರ ಮಹತ್ವದಾಗಿದೆ.



ಆದ್ದರಿಂದ ಎಲ್ಲಾ ಮಾರಾಟಗಾರರು ಕಾನೂನಿ ಅಡಿಯಲ್ಲಿ ಪರವಾನಗಿ ಹೊಂದಿದ ಕಂಪನಿಗಳ ಬೀಜ, ಗೊಬ್ಬರ, ಕೀಟನಾಶಕಗಳನ್ನು ಮಾರಾಟ ಮಾಡಬೇಕು.
ಜಿಲ್ಲೆಯಲ್ಲಿ ಗೊಬ್ಬರದ ಕೊರತೆ ಇರುವುದಿಲ್ಲ. ಯಾರಾದರೂ ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಿದಲ್ಲಿ ಅಂತಹವರ ವಿರುದ್ದ ಕ್ರಮದ ಜೊತೆಗೆ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದರು.
ಸಹಾಯಕ ಕೃಷಿ ನಿರ್ದೇಶಕ ಎಸ್.ಬಿ.ಪಾಟೀಲ್ ಅವರು ಮಾತನಾಡಿ ರೈತರು ಖರೀದಿಸಿದ ಬೀಜ, ಗೊಬ್ಬರ ಮತ್ತು ಕೀಟನಾಶಕಗಳಿಗೆ ಪ್ರತ್ಯೇಕವಾಗಿ ರಶೀದಿಯನ್ನು ಕಡ್ಡಾಯವಾಗಿ ಕೊಡಬೇಕು.

ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ರೈತರಿಂದ ದೂರುಗಳು ಬಂದಿದ್ದು, ಎಲ್ಲಾ ಮಾಲಿಕರು ತಮ್ಮ ಅಂಗಡಿಗಳಲ್ಲಿ ದೊರೆಯುವ ಬೀಜ, ಗೊಬ್ಬರದ ಬಗ್ಗೆ ಎಲ್ಲರಿಗೂ ಕಾಣಿಸುವಂತೆ ದರಪಟ್ಟಿಯನ್ನು ಹಾಕಬೇಕು. ಕಾಲ ಕಾಲಕ್ಕೆ ತಮ್ಮ ಪರವಾನಗಿ ಪತ್ರವನ್ನು ನವೀಕರಿಸಬೇಕೆಂದು ತಿಳಿಸಿದರು.
ಜಾಗೃತ ಕೋಶದ ಸಹಾಯಕ ನಿರ್ದೇಶಕ ಮುಜ್ಬುಲ್ ರೆಹಮಾನ್ ಅವರು ಮಾತನಾಡಿ ನಮ್ಮ ರಾಜ್ಯದಲ್ಲಿ ಮಾರಾಟಕ್ಕೆ ಅಧಿಕಾರವಿರುವ ಕಂಪನಿಗಳ ಪರವಾನಗಿ ನೋಡಿಕೊಂಡು ಅಂತಹ ಕಂಪನಿಗಳ ಬೀಜಗಳನ್ನು ಖರೀದಿಸಿ ಮಾರಾಟ ಮಾಡಬೇಕು.
ನಮ್ಮ ರಾಜ್ಯಕ್ಕೆ ಬೇಡಿಕೆಯಿರುವ ಗೊಬ್ಬರವನ್ನು ಖರೀದಿಸಿ ಪರವಾನಗಿಯಲ್ಲಿ ನಮೂದಿಸಿದ ಗೋದಾಮಿ ಮತ್ತು ಅಂಗಡಿಗಳಲ್ಲಿ ಮಾತ್ರ ದಾಸ್ತಾನು ಮಾಡಬೇಕು.

ಅನಧಿಕೃತ ಗೋದಾಮಿನಲ್ಲಿ ಮಾರಾಟ ಮಾಡಿದರೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ವರದಿ : ಶ್ರೀನಿವಾಸ ನಾಯ್ಕ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ