Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಥಮ: ಸಂಕೀರ್ಣ ಲಿವರ್‌ ಶಸ್ತ್ರಚಿಕಿತ್ಸೆ ಮೂಲಕ ಕ್ಯಾನ್ಸರ್‌ ರೋಗಿಯ ಜೀವ ಉಳಿಸಿದ ಎಸ್‌ ಎಸ್‌ ನಾರಾಯಣ ಆಸ್ಪತ್ರೆಯ ವೈದ್ಯರು

Advertisement
ದಾವಣಗೆರೆ:ಲಿವರ್‌ ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ರೋಗಿಯೊಬ್ಬರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ (ಲಿವರ್‌ ಸರ್ಜರಿ) ಯ ಮೂಲಕ ಜೀವವನ್ನು ಉಳಿಸಿ ಇಲ್ಲಿನ ಎಸ್‌ ಎಸ್‌ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್‌ ನ ವೈದ್ಯರು ಮಹತ್ವದ ಸಾಧನೆಯನ್ನು ಮಾಡಿದ್ದಾರೆ. ವಿಶೇಷ ವೆಂದರೆ ಈ ರೀತಿಯ ಸಂಕೀರ್ಣ ಶಸ್ತ್ರಚಿಕಿತ್ಸೆ ದಾವಣಗೆರೆಯಲ್ಲಿ ಇದೇ ಮೊದಲ ಬಾರಿ ನಡೆದಿದೆ.

ವೈದ್ಯರು 72 ವರ್ಷದ ಹಿರಿಯರೊಬ್ಬರಿಗೆ ಪೋಸ್ಟೀರಿಯರ್ ಸೆಕ್ಷನೆಕ್ಟಮಿ (ಲಿವರ್‌ಗೆ ಸಂಬಂಧಿಸಿದ) ಸಂಕೀರ್ಣ ಶಸ್ರ್ತಚಿಕಿತ್ಸೆ ನಡೆಸಿ ಯಶಸ್ವಿಯಾಗಿದ್ದಾರೆ. ಈ ಚಿಕಿತ್ಸೆಯಲ್ಲಿ ಲಿವರ್‌ನ ರೋಗ ಪೀಡಿತ ಭಾಗವನ್ನು ಮಾತ್ರ ತೆಗೆದು, ಉಳಿದ ಆರೋಗ್ಯಯುತ ಭಾಗವನ್ನು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಮಾಡಲಾಗಿದೆ.

ಶಸ್ತ್ರಚಿಕಿತ್ಸಾಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಆರ್.ಕೆ. ಹನುಮಂತ್ ನಾಯ್ಕ್ ನೇತೃತ್ವದ ತಂಡ ಸುಮಾರು ೭ ಗಂಟೆ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ರೋಗಿಗೆ ಜೀವದಾನ ಮಾಡಿದ್ದಾರೆ.

ಶಸ್ತ್ರ ಚಿಕಿತ್ಸೆ ಬಗ್ಗೆ ಮಾತನಾಡಿದ ಡಾ. ಹನುಮಂತ ನಾಯ್ಕ್‌ ಅವರು, ಹಲವು ದಿನಗಳಿಂದ ಹೊಟ್ಟೆ ನೋವು, ಹಸಿವಾಗದಿರುವುದು ಹಾಗೂ ತೂಕ ಕಳೆದುಕೊಳ್ಳುವ ಸಮಸ್ಯೆಯಿಂದ ಬಳಲುತ್ತಿದ್ದ 72 ವರ್ಷದ ವ್ಯಕ್ತಿಯೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಪರೀಕ್ಷಿಸಿದಾಗ ಯಕೃತ್ತ್‌ನಲ್ಲಿ ೬ ಸೆಂ.ಮೀ. ಗಾತ್ರದ ಹೆಪಟೋಸೆಲ್ಯುಲರ್ ಕ್ಯಾನ್ಸರ್ ಗಡ್ಡೆಗಳು ಇರುವುದು ದೃಢಪಟ್ಟಿತು. ವೈದ್ಯಕೀಯ ಪರಿಭಾಷೆಯಲ್ಲಿ ಈ ಸ್ಥಿತಿಯನ್ನು ಗ್ರೇಡ್ ಬಿ, ಎರಡನೇಯ ಹಂತದ ಕ್ಯಾನ್ಸರ್ ಎಂದು ಗುರುತಿಸಲಾಗುತ್ತದೆ ಎಂದರು.

ಪೋಸ್ಟೀರಿಯರ್ ಸೆಕ್ಷನೆಕ್ಟಮಿ ಶಸ್ತ್ರಚಿಕಿತ್ಸೆಯು ಅತ್ಯಂತ ಸವಾಲಿನದ್ದಾಗಿದೆ. ಏಕೆಂದರೆ ಯಕೃತ್ತಿನ ಹಾನಿಗೊಳಗಾದ ಭಾಗವು (ಸೆಗ್ಮೆಂಟ್ 6 ಮತ್ತು 7) ಪ್ರಮುಖ ರಕ್ತನಾಳಗಳ ಹತ್ತಿರ, ಬಲಭಾಗದ ಆಳದಲ್ಲಿದೆ. ಹೀಗಾಗಿ, ಈ ಭಾಗವನ್ನು ತೆಗೆದುಹಾಕುವಾಗ ಅತ್ಯಂತ ಎಚ್ಚರಿಕೆ ಅಗತ್ಯವಿರುತ್ತದೆ. ರೋಗ ಪೀಡಿತ ಭಾಗವನ್ನು ಮಾತ್ರ ಕತ್ತರಿಸಿ, ಉಳಿದ ಭಾಗವು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ಈ ಶಸ್ತ್ರಚಿಕಿತ್ಸೆಗೆ ಪ್ರಾವೀಣ್ಯ ಮತ್ತು ನಿಖರತೆ ಅವಶ್ಯಕ ಎಂದರು.

"ಈ ರೀತಿಯ ಶಸ್ತ್ರಚಿಕಿತ್ಸೆಯು ವೃದ್ಧ ರೋಗಿಗಳಲ್ಲಿ ಅಪಾಯಕಾರಿ. ಆದರೆ, ನಮ್ಮ ತಂಡ ಶಸ್ತ್ರಚಿಕಿತ್ಸೆಯನ್ನು ಸುಗಮವಾಗಿ ನಡೆಸಿದೆ ಮತ್ತು ರೋಗಿಯು ಸಂಪೂರ್ಣವಾಗಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ,” ಎಂದು ಡಾ. ನಾಯ್ಕ್ ತಿಳಿಸಿದರು.

ಈ ಸಾಧನೆಯ ಕುರಿತು ಮಾತನಾಡಿದ ಎಸ್‌ಎಸ್‌ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್‌ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಸುನಿಲ್ ಭಂಡಾರಿಗಲ್, “ನಮ್ಮ ವೈದ್ಯರು ದಾವಣಗೆರೆಯಲ್ಲಿಯೇ ಮೊದಲ ಬಾರಿಗೆ ಈ ಸಂಕೀರ್ಣ ಯಕೃತ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿರುವುದು ನಮಗೆ ಸಂತಸ ತಂದಿದೆ. ಇದು ನಮ್ಮ ಆಸ್ಪತ್ರೆ ಅತ್ಯುನ್ನತ ಗುಣಮಟ್ಟದ, ಹೊಸತನದಿಂದ ಕೂಡಿದ ಹಾಗೂ ರೋಗಿ ಕೇಂದ್ರಿತ ಆರೈಕೆ ನೀಡುವ ನಮ್ಮ ಬದ್ಧತೆಯನ್ನು ತೋರಿಸುತ್ತದೆ. ನಾನು ಶಸ್ತ್ರಚಿಕಿತ್ಸಾ ತಂಡವನ್ನು ಅಭಿನಂದಿಸುತ್ತೇನೆ ಮತ್ತು ಮಧ್ಯ ಕರ್ನಾಟಕದ ಜನತೆಗೆ ವಿಶ್ವ ದರ್ಜೆಯ ಆರೋಗ್ಯ ಸೇವೆಯನ್ನು ಇನ್ನಷ್ಟು ಹತ್ತಿರ ತರಲು ನಾವು ಬದ್ಧರಾಗಿದ್ದೇವೆ,” ಎಂದು ಹೇಳಿದರು.

ವರದಿ:ಸುಧೀರ್ ಕುಲಕರ್ಣಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ