Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚೊಚ್ಚಲ ಪಂದ್ಯದಲ್ಲೇ ನಾಲ್ಕು ವಿಕೆಟ್ ಅಶ್ವಿನ್ ಕುಮಾರ್ ದಾಖಲೆ

Advertisement
ಹೈದರಾಬಾದ್​: ಐಪಿಎಲ್​ನ 12ನೇ ಪಂದ್ಯ ಸೋಮವಾರ ನಡೆಯಿತು. ಇದರಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ಮತ್ತು ಮುಂಬೈ ಇಂಡಿಯನ್ಸ್​ ತಂಡಗಳು ಮುಖಾಮುಖಿ ಆಗಿದ್ದವು. ಈ ಪಂದ್ಯದಲ್ಲಿ ಮುಂಬೈ ತಂಡ 8 ವಿಕೆಟ್​ಗಳಿಂದ ಗೆಲುವು ಸಾಧಿಸಿ ಗೆಲುವಿನ ಖಾತೆ ತೆರೆದಿದೆ.

ವಾಂಖೆಡೆ ಮೈದಾನದಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟ್​ ಮಾಡಿದ್ದ ಕೆಕೆಆರ್​ ತಂಡದ ಮೇಲೆ ಮುಂಬೈ ಬೌಲರ್​ಗಳು ಸವಾರಿ ಮಾಡಿದರು. ತಂಡವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿ ಆದರು. ಕೆಕೆಆರ್​ ತಂಡ 116 ರನ್​ಗಳಿಗೆ ಸರ್ವಪತನ ಕಂಡಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ತಂಡ ರಯಾನ್​ ರಿಕಲ್ಟನ್​ ಅವರ ಭರ್ಜರಿ ಬ್ಯಾಟಿಂಗ್​ ಪ್ರದರ್ಶನದಿಂದಾಗಿ 12.5 ಓವರ್​ಗಳಲ್ಲೇ 2 ವಿಕೆಟ್​ ಕಳೆದುಕೊಂಡು ಸುಲಭವಾಗಿ ಗೆಲುವಿನ ದಡ ಸೇರಿಕೊಂಡಿತು. ಆದರೆ ಈ ಪಂದ್ಯದ ಗೆಲುವಿನಲ್ಲಿ ಯುವ ಬೌಲರ್​ ಪ್ರಮುಖ ಪಾತ್ರ ವಹಿಸಿದ್ದಾರೆ.

ಅಶ್ವನಿ ಕುಮಾರ್ಘರ್ಜನೆಗೆ ಕೆಕೆಆರ್ಸೈಲೆಂಟ್​: ಮುಂಬೈ ಪರ ಬೌಲಿಂಗ್​ ಮಾಡಿದ ಯುವ ವೇಗಿ ಅಶ್ವನಿ ಕುಮಾರ್​ ಕೆಕೆಆರ್​ ತಂಡದ ನಾಲ್ವರು ಬಲಿಷ್ಠ ಆಟಗಾರರ ವಿಕೆಟ್​ ಉರುಳಿಸುವಲ್ಲಿ ಯಶಸ್ವಿ ಆದರು. 3 ಓವರ್​ ಬೌಲ್​ ಮಾಡಿದ ಅಶ್ವನಿ 24 ರನ್​ ನೀಡಿ ಅಜಿಂಕ್ಯಾ ರಹಾನೆ, ರಿಂಕು ಸಿಂಗ್​​, ಮನಿಶ್​ ಪಾಂಡೆ, ರಸೆಲ್​ ವಿಕೆಟ್​ಗಳನ್ನು ಉರುಳಿಸಿದರು. ಇದರೊಂದಿಗೆ ಐಪಿಎಲ್​ನಲ್ಲಿ ದೊಡ್ಡ ದಾಖಲೆ ಬರೆದಿದ್ದಾರೆ.

ಇತಿಹಾಸ ಸೃಷ್ಟಿಸಿದ ಅಶ್ವನಿ ಕುಮಾರ್​: ಐಪಿಎಲ್​ ಪಾದಾರ್ಪಣೆ ಪಂದ್ಯದಲ್ಲೇ 4 ವಿಕೆಟ್​ ಪಡೆಯುವ ಮೂಲಕ ಅಶ್ವನಿ ಕುಮಾರ್​ ಇತಿಹಾಸ ಸೃಷ್ಟಿಸಿದ್ದಾರೆ. ಈ ಸಾಧನೆ ಮಾಡಿದ ಮೊದಲ ಭಾರತೀಯ ಬೌಲರ್​ ಎನಿಸಿಕೊಂಡಿದ್ದಾರೆ. ಅಲ್ಲದೆ ಐಪಿಎಲ್​ ಡೆಬ್ಯೂ ಪಂದ್ಯದಲ್ಲೇ ಅತಿ ಹೆಚ್ಚು ವಿಕೆಟ್​ ಪಡೆದ ಒಟ್ಟಾರೆ ಎರಡನೇ ಬೌಲರ್​ ಎನಿಸಿಕೊಂಡಿದ್ದಾರೆ. ಈ ಪಟ್ಟಯಲ್ಲಿ ಅಲ್ಜಾರಿ ಜೋಸೆಫ್ ಮೊದಲ ಸ್ಥಾನದಲ್ಲಿದ್ದಾರೆ. ಇವರು ಐಪಿಎಲ್​ ಪಾದಾರ್ಪಣೆ ಪಂದ್ಯದಲ್ಲಿ 6 ವಿಕೆಟ್​ಗಳನ್ನು ಪಡೆದಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ