Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಷ್ಯಾದಲ್ಲಿ 2ನೇ ಅತಿ ದೊಡ್ಡ ಅಮೇಜಾನ್ ಆಫೀಸ್ ಬೆಂಗಳೂರಿನಲ್ಲಿ ಆರಂಭ

Advertisement
ಏಷ್ಯಾದಲ್ಲಿ 2ನೇ ಅತೀದೊಡ್ಡ ಅಮೇಜಾನ್ ಆಫೀಸ್ ಬೆಂಗಳೂರಿನಲ್ಲಿ ಆರಂಭ, ಬರೋಬ್ಬರಿ 7,000 ಉದ್ಯೋಗಿಗಳ ಕೆಲಸ ಮಾಡಲು ಸ್ಥಳವಕಾಶವಿರುವ ಅತೀ ದೊಡ್ಡ ಕಚೇರಿ ಇದಾಗಿದೆ. 11 ಮಹಡಿ, 1.1 ಮಿಲಿಯನ್ ಚದರ ಅಡಿ ವಿಸ್ತೀರ್ಣ ಹೊಂದಿದೆ.

ಏಷ್ಯಾದಲ್ಲಿ ಎರಡನೇ ಅತೀ ದೊಡ್ಡ ಅಮೇಜಾನ್ ಕಚೇರಿ ಬೆಂಗಳೂರಿನಲ್ಲಿ ಕಾರ್ಯಾರಂಭಗೊಡಿದೆ.12 ಮಹಡಿಗಳ 1.1 ಮಿಲಿಯನ್ ಚದರ ಅಡಿ ವಿಸ್ತೀರ್ಣ ಈ ಕ್ಯಾಂಪಸ್‌ನಲ್ಲಿ ಬರೋಬ್ಬರಿ 7000 ಉದ್ಯೋಗಿಗಳು ಏಕಾಕಾಲದಲ್ಲಿ ಕೆಲಸ ಮಾಡಲು ಸಾಧ್ಯವಿದೆ. ಇ ಕಾಮರ್ಸ್, ಪೇಮೆಂಟ್, ಮಾರ್ಕೆಟಿಂಗ್, ಟೆಕ್ನಾಲಜಿ, ಸರ್ವೀಸ್, ಸೇಲ್ಸ್ ಸೇರಿದಂತೆ ಎಲ್ಲಾ ವಿಭಾಗ ಒಂದೇ ಕ್ಯಾಂಪಸ್‌ನಲ್ಲಿ ಕೆಲಸ ಮಾಡಲಿದೆ.

ಐದು ಏಕರೆ ಪ್ರದೇಶದಲ್ಲಿ ಅಮೇಜಾನ್ ಕಚೇರಿ ತಲೆ ಎತ್ತಿ ನಿಂತಿದೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ 15 ಕಿಲೋಮೀಟರ್ ದೂರದಲ್ಲಿ ಈ ಕಾರ್ಪೋರೇಟ್ ಕ್ಯಾಂಪಸ್ ಇಂದು ಉದ್ಘಾಟನೆಗೊಂಡಿದೆ. ಸಚಿವ ಎಂಬಿ ಪಾಟೀಲ್ ಅಮೇಜಾನ್ ನೂತನ ಕಚೇರಿ ಉದ್ಘಾಟನೆ ಮಾಡಿದ್ದಾರೆ.

ಅಮೇಜಾನ್ ಈಗಾಗಲೇ ಭಾರದಲ್ಲಿ 40 ಬಿಲಿಯನ್ ಅಮೆರಿಕನ್ ಡಾಲರ್ ಹೂಡಿಕೆ ಮಾಡಿದೆ. 2030ರ ವೇಳೆಗೆ ಮತ್ತೆ 35 ಬಿಲಿಯನ್ ಅಮೆರಿಕನ್ ಡಾಲರ್ ಹೂಡಿಕೆ ಮಾಡಲಿದೆ. ಭಾರತದಲ್ಲಿ ಅತೀ ಹೆಚ್ಚು ಹೂಡಿಕೆ ಮಾಡುತ್ತಿರುವ ಅಮೇಜಾನ್ ಇದೀಗ ಹೊಸ ದಾಖಲೆ ಬರೆಯಲು ಸಜ್ಜಾಗಿದೆ.

ಏಷ್ಯಾದಲ್ಲಿ ಅಮೇಜಾನ್ ಕಂಪನಿಯ ಎರಡು ಅತೀ ದೊಡ್ಡ ಕಚೇರಿಗಳು ಭಾರತದಲ್ಲೇ ಇದೇ. ಏಷ್ಯಾದ ಅತೀ ದೊಡ್ಡ ಅಮೇಜಾನ್ ಆಫೀಸ್ ಇರುವುದು ಹೈದರಾಬಾದ್‌ನಲ್ಲಿ. ಇದೀಗ 2ನೇ ಅತೀ ದೊಡ್ಡ ಆಫೀಸ್ ಬೆಂಗಳೂರಿನಲ್ಲಿ ಆರಂಭಗೊಂಡಿದೆ. ಈ ಮೂಲಕ ಎರಡು ಐಟಿ ಸಿಟಿಗಳಲ್ಲಿ ಅದರಲ್ಲೂ ದಕ್ಷಿಣ ಭಾರತದಲ್ಲೇ ಅಮೇಜಾನ್ ಹೂಡಿಕೆ ಮಾಡಿದೆ.

ಕರ್ನಾಟಕದಲ್ಲಿ ಅತೀ ವೇಗವಾಗಿ ಅಮೇಜಾನ್ ಕಂಪನಿ ಬೆಳೆಯುತ್ತಿದೆ. ಕರ್ನಾಟಕ ಮೂಲೆ ಮೂಲೆಯಲ್ಲೂ ಅಮೇಜಾನ್ ಡೆಲಿವರಿ ನೀಡುತ್ತಿದೆ. ತ್ವರಿತ ಡೆಲಿವರಿ ಸೇರಿದಂತೆ ಅಮೇಜಾನ್ ಕಂಪನಿ ಅತೀ ದೊಡ್ಡ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ