Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾಸ್‌ ಕಟರ್‌ ಬಳಸಿ ಎಟಿಎಂ ದರೋಡೆಗೈದ ಖದೀಮರು 

Advertisement
ಬೆಳಗಾವಿ: ಎಟಿಎಂ ನುಗ್ಗಿದ ಕಳ್ಳರು ಗ್ಯಾಸ್‌ ಕಟರ್‌ ಸಹಾಯದಿಂದ ಎಟಿಎಂ ಯಂತ್ರವನ್ನು ಮುರಿದು 75,600 ರೂ. ಹಣವನ್ನು ದೋಚಿರುವಂತಹ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ನಡೆದಿದೆ.

ಸಾಂಬ್ರಾ ಗ್ರಾಮದ ಮುಖ್ಯರಸ್ತೆಯಲ್ಲಿರುವ ಎಟಿಎಂ ಕೇಂದ್ರದಲ್ಲಿ ಈ ಘಟನೆ ಸದಾ ವಾಹನ ದಟ್ಟಣೆ ಇದ್ದರೂ ಈ ಪ್ರದೇಶದಲ್ಲಿ ಎಟಿಎಂ ದರೋಡೆ ನಡೆದಿರುವುದು ಅಚ್ಚರಿ ಮೂಡಿಸಿದೆ. ದುಷ್ಕರ್ಮಿಗಳು ಎಟಿಎಂ ಕೇಂದ್ರಕ್ಕೆ ನುಗ್ಗಿದ ಏಳೇ ನಿಮಿಷದಲ್ಲಿ ಹಣ ದೋಚಿಕೊಂಡು ಹೋಗಿದ್ದಾರೆ.

ವರದಿಗಳ ಪ್ರಕಾರ ಮೂವರು ಮುಸುಕುಧಾರಿಗಳು ಎಟಿಎಂಗೆ ನುಗ್ಗಿದ್ದು, ಮೊದಲಿಗೆ ಬಣ್ಣದ ಸ್ಪ್ರೇ ಬಳಸಿ ಕ್ಯಾಮೆರಾವನ್ನು ಬಂದ್‌ ಮಾಡಿದ್ದಾರೆ. ಇದು ಬ್ಯಾಂಕ್‌ ಕಂಟ್ರೋಲ್‌ ರೂಂಗೆ ಮಾಹಿತಿ ರವಾನೆಯಾಗಿದೆ.

ತಕ್ಷಣ ಈ ಬಗ್ಗೆ ಪೊಲೀಸರಿಗೆ ವಿಷಯ ತಿಳಿಸಲಾಗಿದೆ. ಆದರೆ ಪೊಲೀಸರು ಸ್ಥಳಕ್ಕಾಗಮಿಸುವಷ್ಟರಲ್ಲಿ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ.

ಪೊಲೀಸ್‌ ಆಯುಕ್ತ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ಬುಧವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎಟಿಎಂ ಕೇಂದ್ರದಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಹೀಗಾಗಿ ಘಟನೆ ನಡೆದಿದೆ. ಆರೋಪಿಗಳನ್ನು ಪತ್ತೆ ಮಾಡಲು ಮೂರು ತಂಡಗಳನ್ನು ರಚಿಸಲಾಗಿದೆ. ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ಅವರು ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ