Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾಸ್‌ ಕಟರ್‌ ಬಳಸಿ ಎಟಿಎಂ ದರೋಡೆಗೈದ ಖದೀಮರು 

Advertisement
ಬೆಳಗಾವಿ: ಎಟಿಎಂ ನುಗ್ಗಿದ ಕಳ್ಳರು ಗ್ಯಾಸ್‌ ಕಟರ್‌ ಸಹಾಯದಿಂದ ಎಟಿಎಂ ಯಂತ್ರವನ್ನು ಮುರಿದು 75,600 ರೂ. ಹಣವನ್ನು ದೋಚಿರುವಂತಹ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ನಡೆದಿದೆ.

ಸಾಂಬ್ರಾ ಗ್ರಾಮದ ಮುಖ್ಯರಸ್ತೆಯಲ್ಲಿರುವ ಎಟಿಎಂ ಕೇಂದ್ರದಲ್ಲಿ ಈ ಘಟನೆ ಸದಾ ವಾಹನ ದಟ್ಟಣೆ ಇದ್ದರೂ ಈ ಪ್ರದೇಶದಲ್ಲಿ ಎಟಿಎಂ ದರೋಡೆ ನಡೆದಿರುವುದು ಅಚ್ಚರಿ ಮೂಡಿಸಿದೆ. ದುಷ್ಕರ್ಮಿಗಳು ಎಟಿಎಂ ಕೇಂದ್ರಕ್ಕೆ ನುಗ್ಗಿದ ಏಳೇ ನಿಮಿಷದಲ್ಲಿ ಹಣ ದೋಚಿಕೊಂಡು ಹೋಗಿದ್ದಾರೆ.

ವರದಿಗಳ ಪ್ರಕಾರ ಮೂವರು ಮುಸುಕುಧಾರಿಗಳು ಎಟಿಎಂಗೆ ನುಗ್ಗಿದ್ದು, ಮೊದಲಿಗೆ ಬಣ್ಣದ ಸ್ಪ್ರೇ ಬಳಸಿ ಕ್ಯಾಮೆರಾವನ್ನು ಬಂದ್‌ ಮಾಡಿದ್ದಾರೆ. ಇದು ಬ್ಯಾಂಕ್‌ ಕಂಟ್ರೋಲ್‌ ರೂಂಗೆ ಮಾಹಿತಿ ರವಾನೆಯಾಗಿದೆ.

ತಕ್ಷಣ ಈ ಬಗ್ಗೆ ಪೊಲೀಸರಿಗೆ ವಿಷಯ ತಿಳಿಸಲಾಗಿದೆ. ಆದರೆ ಪೊಲೀಸರು ಸ್ಥಳಕ್ಕಾಗಮಿಸುವಷ್ಟರಲ್ಲಿ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ.

ಪೊಲೀಸ್‌ ಆಯುಕ್ತ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ಬುಧವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎಟಿಎಂ ಕೇಂದ್ರದಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಹೀಗಾಗಿ ಘಟನೆ ನಡೆದಿದೆ. ಆರೋಪಿಗಳನ್ನು ಪತ್ತೆ ಮಾಡಲು ಮೂರು ತಂಡಗಳನ್ನು ರಚಿಸಲಾಗಿದೆ. ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ಅವರು ತಿಳಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ