Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ

Advertisement

ಕಲಾದಗಿ : ಬಾಗಲಕೋಟೆ ಜಿಲ್ಲಾ ಪ್ರವಾಸದಲ್ಲಿರುವ ರಾಜ್ಯದ ಉಪ ಲೋಕಾಯುಕ್ತ ಬಿ ವೀರಪ್ಪ ಅವರು ನವನಗರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಈ ವೇಳೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಮಯಕ್ಕೆ ಬಸ್ ಸೌಲಭ್ಯ ದೊರೆಯದೇ ಪ್ರತಿದಿನ ತಡವಾಗುತ್ತಿದೆ ಎಂದು ಅಳಲು ತೋಡಿಕೊಂಡರು. ನಂತರ ವಿವಿಧ ಬೇಕರಿಗಳಿಗೆ ದಿಢೀರ್ ತಪಾಸಣೆ ನಡೆಸಿದರು. ಈ ವೇಳೆ ಆಹಾರ ತಿನಿಸುಗಳ ಗುಣಮಟ್ಟ, ಸುರಕ್ಷತೆ ಹಾಗೂ ನೈರ್ಮಲ್ಯದ ಕುರಿತು ಕೂಲಂಕಷ ಪರಿಶೀಲನೆ ನಡೆಸಲಾಯಿತು ತಪಾಸಣೆಯ ಸಂದರ್ಭದಲ್ಲಿ ಬೇಕರಿ ಮಾಲೀಕರಿಗೆ ಎಫ್‌ಎಸ್‌ಎಸ್‌ಎಐ (FSSAI) ಪ್ರಮಾಣಪತ್ರದ ಲಭ್ಯತೆ ಕುರಿತು ಉಪಲೋಕಾಯುಕ್ತರು ಪ್ರಶ್ನಿಸಿದರು. ಅಲ್ಲದೆ ಬೇಕರಿಯ ಒಳಗಿದ್ದ ಎಲ್‌ಪಿಜಿ ಸಿಲಿಂಡರ್ ಸುರಕ್ಷಿತವಲ್ಲ ಎಂದು ಗಮನಿಸಿ, ಸಿಲಿಂಡರ್ ಅನ್ನು ಹೊರಗೆ ಇಡಿ ಇದು ಅಪಾಯಕಾರಿ ಅಗತ್ಯವಿದ್ದರೆ ಒಳಗೆ ದೀಪ ಇಟ್ಟುಕೊಳ್ಳಿ ಆದರೆ ಸಿಲಿಂಡರ್ ಅನ್ನು ಹೊರಗೆ ಕಂಬಿ ಹಾಕಿ ಸುರಕ್ಷಿತವಾಗಿಡಿ ಎಂದು ಸೂಚಿಸಿದರು. ಸಿಲಿಂಡರ್‌ನಿಂದ ಪೈಪ್ ಅನ್ನು ಸರಿಯಾಗಿ ಅಳವಡಿಸುವಂತೆ ಸಲಹೆ ನೀಡಿದರು ದಾಸ್ತಾನು ಕುರಿತು ಪರಿಶೀಲನೆ ನಡೆಸಿದಾಗ, ಇದು ಹೋಲ್ ಸೇಲ್ ದಾಸ್ತಾನೇ? ನಿಮ್ಮದೇ ದಾಸ್ತಾನೇ? ಎಂದು ಕೇಳಿದರು. ಅವಧಿ ಮೀರಿದ ಉತ್ಪನ್ನಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದ ಅವರು, ಪ್ರತಿದಿನ ಹೊಸ ಉತ್ಪನ್ನಗಳನ್ನು ಇರಿಸಿ ಎಂದು ತಿಳಿಸಿದರು. ಉಪಯೋಗಿಸುತ್ತಿರುವ ಎಣ್ಣೆಯು ತಾಜಾ ಆಗಿದೆಯೇ ಎಂದು ಖಚಿತಪಡಿಸಿಕೊಳ್ಳುವಂತೆ ಸೂಚಿಸಿದರು. ಸುರಕ್ಷತಾ ನಿಯಮಗಳ ಉಲ್ಲಂಘನೆ ಮತ್ತು ಲೋಪಗಳ ಹಿನ್ನೆಲೆಯಲ್ಲಿ ಸಂಬಂಧಪಟ್ಟವರಿಗೆ ಶೋ-ಕಾಸ್ ನೋಟಿಸ್ ನೀಡಲು ಉಪಲೋಕಾಯುಕ್ತ ಬಿ. ವೀರಪ್ಪ ಆದೇಶಿಸಿದರು. ಈ ತಪಾಸಣೆಯು ಗ್ರಾಹಕರಿಗೆ ಸುರಕ್ಷಿತ ಆಹಾರ ತಲುಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.
ವರದಿ : ಬಸವರಾಜ ಪೂಜಾರಿ

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆಗೃಹಲಕ್ಷ್ಮಿ ದಿನಾಚರಣೆ : ಸಿಹಿ ಹಂಚಿ ಸಂಭ್ರಮಿಸಿದ  ಮಹಿಳೆಯರು