ಕಲಾದಗಿ : ಬಾಗಲಕೋಟೆ ನಗರದ ನವನಗರದಲ್ಲಿರುವ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಹಿಂದೂ ಯುವತಿಯೊಬ್ಬಳನ್ನು ಕೊಠಡಿಯಲ್ಲಿ ಕೂಡಿ ಹಾಕಿ ದೌರ್ಜನ್ಯ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಯು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಹಿಂದೂ ಮುಖಂಡ ಕುಮಾರಸ್ವಾಮಿ ಹಿರೇಮಠ ತಿಳಿಸಿದರು. ತಡ ರಾತ್ರಿ ಸುಮಾರು 12 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಯುವತಿಯನ್ನು ಆಸ್ಪತ್ರೆಯ ಶೌಚಾಲಯದ ಕೊಠಡಿಯೊಂದರಲ್ಲಿ ಕೂಡಿ ಹಾಕಿ ಹಿಂಸೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಕೃತ್ಯದಲ್ಲಿ ಫರೀದ ಸಾಬ ಡಾಂಗಿ ಎಂಬ ಯುವಕ ಭಾಗಿಯಾಗಿದ್ದಾನೆ ಎಂದು ದೂರಲಾಗಿದೆ.
ಸಾರ್ವಜನಿಕ ಆಸ್ಪತ್ರೆಯಲ್ಲಿ ಸುರಕ್ಷತೆಯ ಕೊರತೆ: ಸಾರ್ವಜನಿಕರು ನಂಬಿಕೆಯಿಂದ ಬರುವ ಸರ್ಕಾರಿ ಆಸ್ಪತ್ರೆಯಲ್ಲಿ ಇಂತಹ ಘಟನೆ ನಡೆದಿರುವುದು ಮಹಿಳೆಯರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಎಬ್ಬಿಸಿದೆ. ಆರೋಪಿ ದಂಗಿ ನದಾಫ ಈ ಹಿಂದೆಯೂ ಸಹ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿ ಅಮಾನತುಗೊಂಡಿದ್ದ ಎನ್ನಲಾಗಿದೆ. ಮಹಿಳಾ ಆಯೋಗಕ್ಕೆ ಒತ್ತಾಯ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ವಿಜಯಲಕ್ಷ್ಮಿ ಅವರು ತಕ್ಷಣ ಬಾಗಲಕೋಟೆಗೆ ಭೇಟಿ ನೀಡಿ, ನೊಂದ ಯುವತಿಗೆ ನ್ಯಾಯ ಒದಗಿಸಬೇಕು ಹಾಗೂ ಘಟನೆಯ ಬಗ್ಗೆ ಕೂಲಂಕಷ ತನಿಖೆ ನಡೆಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಕಠಿಣ ಶಿಕ್ಷೆಗೆ ಆಗ್ರಹ: ಇಂತಹ ಘಟನೆಗಳು ಮರುಕಳಿಸದಂತೆ ಉತ್ತರ ಪ್ರದೇಶದ ಮಾದರಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ತಪ್ಪಿತಸ್ಥರಿಗೆ ಸಾರ್ವಜನಿಕವಾಗಿ ಶಿಕ್ಷೆ ನೀಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಸದ್ಯ ಪೊಲೀಸ್ ಇಲಾಖೆಯು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿಕೊಂಡಿದ್ದು, ತನಿಖೆಯನ್ನು ಚುರುಕುಗೊಳಿಸಿದೆ. ವರದಿ : ಬಸವರಾಜ ಪೂಜಾರಿ

