Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗಲಕೋಟೆ: ಜಿಲ್ಲಾ ಆಸ್ಪತ್ರೆಯಲ್ಲಿ ಹಿಂದೂ ಯುವತಿ ಮೇಲೆ ದೌರ್ಜನ್ಯ - ಆಕ್ರೋಶ

Advertisement

ಕಲಾದಗಿ : ಬಾಗಲಕೋಟೆ ನಗರದ ನವನಗರದಲ್ಲಿರುವ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಹಿಂದೂ ಯುವತಿಯೊಬ್ಬಳನ್ನು ಕೊಠಡಿಯಲ್ಲಿ ಕೂಡಿ ಹಾಕಿ ದೌರ್ಜನ್ಯ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಯು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಹಿಂದೂ ಮುಖಂಡ ಕುಮಾರಸ್ವಾಮಿ ಹಿರೇಮಠ ತಿಳಿಸಿದರು. ತಡ  ರಾತ್ರಿ ಸುಮಾರು 12 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಯುವತಿಯನ್ನು ಆಸ್ಪತ್ರೆಯ ಶೌಚಾಲಯದ ಕೊಠಡಿಯೊಂದರಲ್ಲಿ ಕೂಡಿ ಹಾಕಿ ಹಿಂಸೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಕೃತ್ಯದಲ್ಲಿ ಫರೀದ ಸಾಬ ಡಾಂಗಿ  ಎಂಬ ಯುವಕ ಭಾಗಿಯಾಗಿದ್ದಾನೆ ಎಂದು ದೂರಲಾಗಿದೆ.
ಸಾರ್ವಜನಿಕ ಆಸ್ಪತ್ರೆಯಲ್ಲಿ ಸುರಕ್ಷತೆಯ ಕೊರತೆ: ಸಾರ್ವಜನಿಕರು ನಂಬಿಕೆಯಿಂದ ಬರುವ ಸರ್ಕಾರಿ ಆಸ್ಪತ್ರೆಯಲ್ಲಿ ಇಂತಹ ಘಟನೆ ನಡೆದಿರುವುದು ಮಹಿಳೆಯರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಎಬ್ಬಿಸಿದೆ. ಆರೋಪಿ ದಂಗಿ ನದಾಫ ಈ ಹಿಂದೆಯೂ ಸಹ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿ ಅಮಾನತುಗೊಂಡಿದ್ದ ಎನ್ನಲಾಗಿದೆ. ಮಹಿಳಾ ಆಯೋಗಕ್ಕೆ ಒತ್ತಾಯ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ವಿಜಯಲಕ್ಷ್ಮಿ ಅವರು ತಕ್ಷಣ ಬಾಗಲಕೋಟೆಗೆ ಭೇಟಿ ನೀಡಿ, ನೊಂದ ಯುವತಿಗೆ ನ್ಯಾಯ ಒದಗಿಸಬೇಕು ಹಾಗೂ ಘಟನೆಯ ಬಗ್ಗೆ ಕೂಲಂಕಷ ತನಿಖೆ ನಡೆಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಕಠಿಣ ಶಿಕ್ಷೆಗೆ ಆಗ್ರಹ: ಇಂತಹ ಘಟನೆಗಳು ಮರುಕಳಿಸದಂತೆ ಉತ್ತರ ಪ್ರದೇಶದ ಮಾದರಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ತಪ್ಪಿತಸ್ಥರಿಗೆ ಸಾರ್ವಜನಿಕವಾಗಿ ಶಿಕ್ಷೆ ನೀಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಸದ್ಯ ಪೊಲೀಸ್ ಇಲಾಖೆಯು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿಕೊಂಡಿದ್ದು, ತನಿಖೆಯನ್ನು ಚುರುಕುಗೊಳಿಸಿದೆ.   ವರದಿ : ಬಸವರಾಜ ಪೂಜಾರಿ

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೈಗಾರಿಕೆ ಸ್ಥಾಪಿಸಲು ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ : ಕುಮಾರಣ್ಣ ಬೇಸರ98ರ ವೃದ್ಧನ ಕಾಲಿಗೆ ಬಿದ್ದ ನರೇಂದ್ರ ಮೋದಿ : ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಪಶ್ಚಿಮ ಬಂಗಾಳ ಪ್ರಿಯತಮನೊಂದಿಗೆ ಓಡಿಹೋಗಲು ಪತಿ ಮನೆಯಲ್ಲಿಯೇ ಕಳ್ಳತನ : ಇಬ್ಬರು ಅರೆಸ್ಟ್ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ ಬಾಗಲಕೋಟೆ: ಜಿಲ್ಲಾ ಆಸ್ಪತ್ರೆಯಲ್ಲಿ ಹಿಂದೂ ಯುವತಿ ಮೇಲೆ ದೌರ್ಜನ್ಯ - ಆಕ್ರೋಶಯಾದಗಿರಿ ಲೋಕಾಯುಕ್ತದ 'ಮಿಂಚಿನ ದಾಳಿ': ಲಕ್ಷದ ಲಂಚದೊಂದಿಗೆ ಗುರುಮಠಕಲ್ ಪಿಐ ಅರೆಸ್ಟ್!ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸಲು ಸುರೇಶ್ ನಾಯಕ ಒತ್ತಾಯ! ಇಂದು ಸ್ಪಂದನ ಆಸ್ಪತ್ರೆಯಲ್ಲಿ ಡಾ ಸಮಿತ್ ದೇಶಪಾಂಡೆ ಲಭ್ಯಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು : ಮೂವರು ವಿದ್ಯಾರ್ಥಿನಿ ಗಂಭೀರನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ದಾರುಣ ಸಾವು