Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಬೇಕರಿ ಭಸ್ಮ

Advertisement

ಚಿಂಚೋಳಿ : ಕಮಲಾಪುರ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ವಿ.ಕೆ. ಸಲಗರ ಗ್ರಾಮದಲ್ಲಿ ಬುಧವಾರ ರಾತ್ರಿ ಸುಮಾರು 9 ಗಂಟೆಗೆ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಅಯ್ಯಂಗಾರ್ ಬೆಂಗಳೂರು ಬೇಕರಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಬೇಕರಿಯ ಮಾಲೀಕರಾದ ಮಂಜುನಾಥ್ ತಂದೆ ಕಾಶಿನಾಥ್ ಅವರ ಪ್ರಕಾರ, ಅಗ್ನಿ ಅವಘಡದಿಂದ ಬೇಕರಿಯಲ್ಲಿದ್ದ ಯಂತ್ರೋಪಕರಣಗಳು, ಪೀಠೋಪಕರಣಗಳು, ಆಹಾರ ಸಾಮಗ್ರಿಗಳು ಹಾಗೂ ಇತರೆ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಸುಮಾರು ₹25 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಮಾಜಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ದೀಪಕ್ ಸಲಗರ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಳಿಕ ಗ್ರಾಮೀಣ ಕ್ಷೇತ್ರದ ಶಾಸಕರಿಗೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಿ, ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ಮನವಿ ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ದೀಪಕ್ ಸಲಗರ, "ಬಡ ಕುಟುಂಬದ ಜೀವನಾಧಾರವಾಗಿದ್ದ ಬೇಕರಿ ಸಂಪೂರ್ಣ ಸುಟ್ಟು ಹೋಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು" ಎಂದು ಆಗ್ರಹಿಸಿದರು.

ಇದೇ ವೇಳೆ, ಗ್ರಾಮದಲ್ಲಿ ವಿದ್ಯುತ್ ತಂತಿಗಳ ನಿರ್ವಹಣೆ ಸಮರ್ಪಕವಾಗಿಲ್ಲ ಎಂಬ ಆರೋಪ ಕೇಳಿಬಂದಿದ್ದು, ವಿದ್ಯುತ್ ಇಲಾಖೆ ಅಧಿಕಾರಿಗಳು ಸಡಿಲಗೊಂಡಿರುವ ತಂತಿಗಳು ಹಾಗೂ ವಿದ್ಯುತ್ ವ್ಯವಸ್ಥೆಯನ್ನು ತಕ್ಷಣ ದುರಸ್ತಿಪಡಿಸಿ ಇಂತಹ ಅವಘಡಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು. ಜೊತೆಗೆ, ಸಂಬಂಧಪಟ್ಟ ವಿದ್ಯುತ್ ಇಲಾಖೆ ಅಧಿಕಾರಿಗಳು ಸಂತ್ರಸ್ತರಿಗೆ ಅಗತ್ಯ ನೆರವು ಹಾಗೂ ಪರಿಹಾರ ಒದಗಿಸುವಂತೆ ಮನವಿ ಮಾಡಿದರು.

ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿ ಅವಘಡದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.

ವರದಿ : ಸುನಿಲ್ ಸಲಗರ

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಏಷ್ಯಾ ಇಂಟರ್ ನ್ಯಾಷನಲ್  ಕಲ್ಚರ್ ಅಕಾಡೆಮಿ ಯುನಿವರ್ಸಿಟಿಯಿಂದ  ಕಾಳೇಗೌಡರಿಗೆ, ಚೆನ್ನಕೇಶವ ಗೌರವ ಡಾಕ್ಟರೇಟ್ ಪದವಿಗೆ ಅಭಿನಂದಿಸಿದ : ಚಿಂತಕ ಡಾ.  ಸಂಗನ ಬಸಪ್ಪ ಬಿರಾದಾರ್ಹನಿಟ್ರ್ಯಾಪ್ ಮೂಲಕ ಸಹೋದ್ಯೋಗಿಯನ್ನೇ ಕಿಡ್ನ್ಯಾಪ್ : 8 ಜನ ಅರೆಸ್ಟ್ ರಾಯಚೂರು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಕೆಆರ್‌ಎಸ್‌ ಆಗ್ರಹ!ಶಾಸಕ ವಿಜಯಾನಂದ ಕಾಶಪ್ಪನವರ 55.ನೇ ಹುಟ್ಟು ಹಬ್ಬ  ಪ್ರಯುಕ್ತ ವಿದ್ಯಾರ್ಥಿಗಳಿಗೆ  55 ಸಸಿಗಳ ಕೊಡುಗೆಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಘೋರ ದುರಂತ : 7 ಕಾರ್ಮಿಕರು ಸ್ಥಳದಲ್ಲೇ ಸಾವುವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಬೇಕರಿ ಭಸ್ಮ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ರೇಷನ್ ನಲ್ಲಿ ಸಿಗಲಿದೆ ಕ್ವಾಲಿಟಿ ಅಕ್ಕಿ ರೇಣುಕಾಸ್ವಾಮಿ ಕೊಲೆ ಕೇಸ್ : ಪ್ರಮುಖ ಸಾಕ್ಷಿಗೆ ಜೀವ ಬೆದರಿಕೆ, ಡಿಬಾಸ್ ಅಡ್ಮಿನ್ ಅರೆಸ್ಟ್ಗುಟ್ಕಾ ಉಗುಳಲು ಬಸ್ ಕಿಟಕಿಯ ಹೊರಗೆ ತಲೆ ಹಾಕಿದ್ದ ಯುವಕ : ಟಿಪ್ಪರ್ ಬಡೆದು ರಸ್ತೆಗೆ ಬಿದ್ದ ತಲೆಜುಲೈ 10ರಂದು ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ : ಮೋಹನ್ ಭಾಗವತ್, ದತ್ತಾತ್ರೇಯ ಹೊಸಬಾಳೆ ಭಾಗಿ