LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮುಸ್ಲೀಂ ಬಾಂಧವರಿಂದ ಶ್ರದ್ಧೆ, ಭಕ್ತಿಯಿಂದ ಬಕ್ರೀದ್ ಆಚರಣೆ

Advertisement
ಬಸವನ ಬಾಗೇವಾಡಿ: ರಾಜ್ಯಾದ್ಯಂತ ಇಂದು ತ್ಯಾಗ ಬಲಿದಾನಗಳ ಸಂಕೇತವಾದ ಭಕ್ರೀದ ಹಬ್ಬವನ್ನು ಆಚರಿಸಲಾಗುತ್ತಿದೆ. ಇದೇ ರೀತಿ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಕುದುರೆಸಾಲೊಡಿಗಿ ಗ್ರಾಮದಲ್ಲಿ ಮುಸ್ಲಿಂ ಬಾಂಧವರು ಶ್ರದ್ಧೆ ಭಕ್ತಿಯಿಂದ ಬಕ್ರೀದ್ ಹಬ್ಬವನ್ನು ಆಚರಿಸಿದರು.
ಮುಂಜಾನೆ ಗ್ರಾಮದ ಈದ್ಗಾ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ನೆರವೇರಿದ್ದರು ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಧರ್ಮ ಗುರುಗಳ ಹಬ್ಬ ಸಂದೇಶ ಸಾರಿ, ಬಕ್ರೀದ್ ಹಬ್ಬದ ಆಚರಣೆ ಹಾಗೂ ದಾನ ಧರ್ಮದ ಮಹತ್ವ ಕುರಿತು ಬೋಧನೆ ಮಾಡಿದರು. ಸಮಾಜದಲ್ಲಿ ಎಲ್ಲರೊಂದಿಗೆ ಸಹೋದರರಂತೆ ಬಾಳುವಂತೆ ಕರೆ ನೀಡಿದರು. ವಿಶೇಷವಾಗಿ ಪ್ರಾರ್ಥನೆಯಲ್ಲಿ ಚಿಕ್ಕ ಚಿಕ್ಕ ಮಕ್ಕಳು ನಮಾಜ್ ಮಾಡಿದರು.


ಬಳಿಕ ಎಲ್ಲ ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯ ವಿನಯ ಮಾಡಿಕೊಂಡರು.
ಬಕ್ರಿದ್ ಹಬ್ಬದ ವಿಶೇಷತೆ ಏನೆಂದರೆ ಪ್ರವಾದಿ ಇಬ್ರಾಹಿಂ ಅವರು ತಮ್ಮ ಪುತ್ರನನ್ನು ದೇವರಿಗೆ ಅರ್ಪಣೆ ಮಾಡಲು ಮುಂದಾದಾಗ ಮೊಹಮ್ಮದ್ ಪೈಗಂಬರರು ಇಬ್ರಾಹಿಂ ಪುತ್ರನನ್ನು ಬಲಿ ನೀಡದೆ ಕುರಿಯನ್ನು ಅರ್ಪಣೆ ಮಾಡುವಂತೆ ಹೇಳುತ್ತಾರೆ. ಆಗ ಕುರಿಯನ್ನು ಅರ್ಪಿಸಲಾಗುತ್ತದೆ. ಅಂದಿನಿಂದ ಬಕ್ರಿದ್ ಹಬ್ಬವನ್ನು ಆಚರಿಸಲಾಗುತ್ತಿದೆ ಎಂಬ ಪ್ರತೀತಿ ಇದೆ.
ಬಕ್ರಿದ್ ಹಬ್ಬದಲ್ಲಿ ಮುಖ್ಯವಾಗಿ ಮುಸ್ಲಿಮರು ದಾನ ಧರ್ಮಗಳು ಮಾಡುತ್ತಾರೆ. ಬಕ್ರಿದ್ ನಲ್ಲಿ ನೀಡುವ ಬಲಿಯಲ್ಲಿ ಮೂರು ಭಾಗಗಳು ಮಾಡಲಾಗುತ್ತದೆ ಒಂದು ಭಾಗವನ್ನು ತಾವೇ ಇಟ್ಟುಕೊಂಡು, ಉಳಿದ ಎರಡು ಭಾಗಗಳಲ್ಲಿ ಒಂದು ಭಾಗವನ್ನು ಸಂಬಂಧಿಕರಿಗೆ ಇನ್ನೊಂದು ಭಾಗ ಅಶಕ್ತರಿಗೆ ನೀಡುತ್ತಾರೆ.
ಇತರನಾಗಿ ಬಕ್ರೀದ್ ಹಬ್ಬವನ್ನು ಪ್ರತಿ ವರ್ಷ ಗ್ರಾಮದಲ್ಲಿ ಆಚರಿಸಲಾಗುತ್ತದೆ.
ಹಬ್ಬದ ಆಚರಣೆಯಲ್ಲಿ 1,) ಗಣಿ ಮುಲ್ಲಾ ಅಂಜುಮನ್ ಇಸ್ಲಾಂ ಕಮಿಟಿಯ ಅಧ್ಯಕ್ಷರು 2)ಶಕೀಲ್ ಅಹಮದ್ ಗುಡ್ನಾಳ ಪತ್ರಕರ್ತರು3( ಆದಮ್ ಸಾಬ ಡವಳಗಿ 4)ಲಾಲಮುನ್ನ ಮುಲ್ಲಾ 5)ಮಮ್ಮದ್ ಇಸ್ಮಾಯಿಲ್ ನಾಯ್ಕೋಡಿ ಅಂಜುಮನ್ ಕಮಿಟಿಯ ಸದಸ್ಯ6) ನಜೀರ್ ಗುಡ್ನಾಳ ಕಾಂಗ್ರೆಸ್ ಮುಖಂಡರು ಇಸ್ಲಾಂ ಕಮಿಟಿಯ ಆಲೀಮ್ ಆದಂತಹ ನೋ ದಾವೂದ ನಾಯ್ಕೋಡಿ ಅನೇಕರು ಉಪಸ್ಥಿತರಿದ್ದರು.
ವರದಿ: Krishna H. Rathod.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ