Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜ.23 ರಂದು ಬೆಂಗಳೂರಿನಲ್ಲಿ ಸಂವಿಧಾನ ವರ್ಸಸ್ ಮನುವಾದ ಹೋರಾಟ: ಬಾಣಸಂದ್ರ ಕೃಷ್ಣಮೂರ್ತಿ

Advertisement
ತುರುವೇಕೆರೆ: ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಜನವರಿ 23 ರಂದು ನಡೆಯಲಿರುವ ಸಂವಿಧಾನ ವರ್ಸಸ್ ಮನುವಾದ ಕಾರ್ಯಕ್ರಮಕ್ಕೆ ತಾಲ್ಲೂಕಿನಿಂದ ಸುಮಾರು 100 ಕ್ಕೂ ಅಧಿಕ ಮಂದಿ ತೆರಳುತ್ತಿರುವುದಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲ್ಲೂಕು ಸಂಚಾಲಕ ಬಾಣಸಂದ್ರ ಕೃಷ್ಣಮೂರ್ತಿ ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಷಾ ಸಂಸತ್ತಿನಲ್ಲಿ ಅಂಬೇಡ್ಕರ್ ಅವರ ಹೆಸರು ಹೇಳುವ ಬದಲು ದೇವರ ಹೆಸರೇಳಿದ್ದರೆ ಏಳೇಳು ಜನ್ಮಕ್ಕೂ ಸ್ವರ್ಗ ಪ್ರಾಪ್ತವಾಗುತ್ತಿತ್ತು ಎಂದು ಮಾತುಗಳು ಅಂಬೇಡ್ಕರ್ ಅವರಿಗೆ ಹಾಗೂ ಸಂವಿಧಾನಕ್ಕೆ ಮಾಡಿದ ಅಪಮಾನವಾಗಿದೆ. ಕೂಡಲೇ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಹಾಗೂ ಅಂಬೇಡ್ಕರ್ ಪ್ರತಿಮೆ ಮುಂಭಾಗ ಮಂಡಿಯೂರಿ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

ದಲಿತ ಯುವ ನಾಯಕ ಪ್ರಿಯಾಂಕ್ ಖರ್ಗೆ ವಿರುದ್ದ ಬಿಜೆಪಿ ನಿರಂತರವಾಗಿ ಪಿತೂರಿ ರಾಜಕಾರಣವನ್ನು ನಡೆಸುತ್ತಿದೆ. ದಲಿತ ನಾಯಕರ ವಿರುದ್ಧದ ಪಿತೂರಿ ರಾಜಕಾರಣವನ್ನು ಹಿಮ್ಮೆಟ್ಟಿಸಲು, ಅಂಬೇಡ್ಕರ್ ಅವರ ಸಂವಿಧಾನವನ್ನು, ಅಂಬೇಡ್ಕರ್ ಅವರ ವಾದವನ್ನು ಉಳಿಸುವುದಕ್ಕಾಗಿ ಈ ಹೋರಾಟ ನಡೆಯುತ್ತಿದೆ. ಆದ್ದರಿಂದ ದಲಿತ ಸಂಘಟನೆ ಸೇರಿದಂತೆ ಅಂಬೇಡ್ಕರ್ ವಾದವನ್ನು ಒಪ್ಪುವ ಎಲ್ಲಾ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲೊಳ್ಳಬೇಕೆಂದು ಮನವಿ ಮಾಡಿದರು.

ತುರುವೇಕೆರೆ ತಾಲ್ಲೂಕಿನಲ್ಲಿ ದಲಿತರಿಗೆ ಸ್ಮಶಾನದ ಸಮಸ್ಯೆ ಎದುರಾಗಿದ್ದು, ದಲಿತ ಸಮುದಾಯದವರು ಮರಣಹೊಂದಿದಾಗ ಅವರ ಅಂತಿಮ ಕಾರ್ಯ ನಡೆಸಲು ಕಷ್ಟಪಡಬೇಕಾದ ಪರಿಸ್ಥಿತಿ ಬಂದಿದೆ. ಕೂಡಲೇ ಸಂಬಂಧಿಸಿದ ತಾಲೂಕು ಆಡಳಿತ ಸಮುದಾಯಕ್ಕೆ ಸ್ಮಶಾನ ಗುರುತಿಸಿ ಅನುಕೂಲ ಮಾಡಿಕೊಡಬೇಕೆಂದರು. ಪತ್ರಕರ್ತ ಸಮ್ಮೇಳನಕ್ಕಾಗಿ ಹಾಕಿಸಿದ್ದ ಫ್ಲೆಕ್ಸ್ ಅಲ್ಲಿ ಯಾರೋ ಕಿಡಿಗೇಡಿಗಳು ಸಮುದಾಯಕ್ಕೆ ಸೇರಿದ ಪತ್ರಕರ್ತ ಸಚಿನ್ ಅವರ ಭಾವಚಿತ್ರವನ್ನು ಹರಿದು ಹಾಕಿದ್ದು, ಕೂಡಲೇ ಪೊಲೀಸ್ ಇಲಾಖೆ ಸಂಬಂಧಿಸಿದ ಕಿಡಿಗೇಡಿಗಳನ್ನು ಹುಡುಕಿ ಕಾನೂನು ರೀತಿ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.

ಗೋಷ್ಟಿಯಲ್ಲಿ ಹಿರೇಡೊಂಕೀಹಳ್ಳಿ ರಾಮಣ್ಣ, ಮಾಯಸಂದ್ರ ಸುಬ್ರಮಣ್ಯ, ಬೀಚನಹಳ್ಳಿ ರಾಮಣ್ಣ, ಮಹದೇವಯ್ಯ, ರಾಮಚಂದ್ರಯ್ಯ, ರಂಗಸ್ವಾಮಿ, ಲೋಕೇಶ್, ಮಧು, ಪ್ರಸನ್ನ, ತುರುವೇಕೆರೆಯ ಸುನಿಲ್, ಶಿವಣ್ಣ, ಬಿಗನೇನಹಳ್ಳಿ ಪುಟ್ಟರಾಜು, ಹೊನ್ನೇನಹಳ್ಳಿ ಕೃಷ್ಣಪ್ಪ ಮುಂತಾದವರಿದ್ದರು.

ವರದಿ: ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್