LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಡೇಟಿಂಗ್ ಆಯಪ್ ಬಳಸುವವರ ಸಂಖ್ಯೆಯಲ್ಲಿ ಬೆಂಗಳೂರು ನಂ. 1

Advertisement

ಬೆಂಗಳೂರು : ವಿವಾಹೇತರ ಸಂಬಂಧಗಳಿಗಾಗಿ ಡೇಟಿಂಗ್ ಆಯಪ್ ಬಳಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೇವಲ ಭಾರತವೊಂದರಲ್ಲೇ 3 ಮಿಲಿಯನ್ ದಾಟಿದ್ದು, ಬೆಂಗಳೂರಿನಲ್ಲೇ ಅತಿ ಹೆಚ್ಚು ಜನ ಬಳಕೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.


ಗ್ಲೀಡನ್ ಎಂಬ ವಿವಾಹೇತರ ಸಂಬಂಧಿ ಆಯಪ್ ವೊಂದು ಇತ್ತೀಚೆಗೆ ಸರ್ವೇಯೊಂದನ್ನು ನಡೆಸಿದ್ದು, ಭಾರತವೊಂದರಲ್ಲೇ ಬರೋಬ್ಬರಿ 3 ಮಿಲಿಯನ್ ಜನ ಈ ಆಯಪ್ ಬಳಕೆ ಮಾಡುತ್ತಿದ್ದಾರೆ ಎಂದು ತಿಳಿಸಿದೆ.ಅದರಲ್ಲೂ ಬೆಂಗಳೂರಿನಲ್ಲೇ ಅತಿ ಹೆಚ್ಚು ಬಳಕೆದಾರರನ್ನು ಹೊಂದಿದೆ.

ವರದಿಯ ಪ್ರಕಾರ, 2024ಕ್ಕೆ ಹೋಲಿಸಿದರೆ, ಈ ಅಪ್ಲಿಕೇಶನ್ ಬಳಕೆದಾರರ ಸಂಖ್ಯೆಯಲ್ಲಿ ಶೇ. 270 ರಷ್ಟು ಏರಿಕೆ ಕಂಡು ಬಂದಿದೆ ಎಂದು ಸ್ವತಃ ಗ್ಲೀಡನ್ ಹೇಳಿಕೊಂಡಿದ್ದು,ಹೊಸ ಬಳಕೆದಾರರ ಪೈಕಿ ಶೇ. 128 ರಷ್ಟು ಮಂದಿ ಮಹಿಳೆಯರೇ ಆಗಿದ್ದಾರೆ. ಒಟ್ಟು ಬಳಕೆದಾರರ ಪೈಕಿ ಶೇ. 40 ರಷ್ಟು ಮಂದಿ 30 ರಿಂದ 45 ವಯಸ್ಸಿನ ವಿವಾಹಿತ ಸ್ತ್ರೀಯರಿದ್ದಾರೆ ಎಂದು ತಿಳಿಸಿದೆ.

ದೇಶದಲ್ಲಿ ಆಯಪ್ ಬಳಕೆದಾರರನ್ನು ನೋಡುವುದಾದರೆ, ಬೆಂಗಳೂರು ಶೇ. 20 ರಷ್ಟು ಹೊಂದುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ನಂತರದ ಸ್ಥಾನದಲ್ಲಿ ಮುಂಬೈ ಶೇ.19, ಕೋಲ್ಕತ್ತಾ ಶೇ.18, ದೆಹಲಿ ಶೇ.15 ಜನ ಈ ಆಯಪ್ ಅನ್ನು ಬಳಸುತ್ತಿದ್ದಾರೆ ಎಂದು ವರದಿ ಮಾಡಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ