Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೇಪಾಳದಲ್ಲಿ ಬೆಳಗಾವಿ ಯುವಕನ ಬರ್ಬರ ಹತ್ಯೆ : ಜೊತೆಗಿದ್ದ ರೂಮ್‌ಮೇಟ್‌ ನಿಂದ ಕೊಲೆ 

Advertisement

ಬೆಳಗಾವಿ : ನೇಪಾಳದಲ್ಲಿ ಹೋಟೆಲ್‌ ಕೆಲಸಕ್ಕೆ ತೆರಳಿದ್ದ ಬೆಳಗಾವಿ ಯುವಕ ತನ್ನ ರೂಮ್‌ಮೇಟ್‌ನಿಂದಲೇ ಬರ್ಬರವಾಗಿ ಕೊಲೆಯಾಗಿದ್ದಾನೆ. 

ಖಾನಾಪುರ ಪಟ್ಟಣದ ನಿವಾಸಿ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ (25) ಕೊಲೆಯಾದ ಯುವಕ. ಈತ ನೇಪಾಳದ ಹೋಟೆಲ್ ಕೆಲಸಕ್ಕೆ ತೆರಳಿದ್ದ. ಜೊತೆಗಿದ್ದ ರೂಮ್‌ಮೇಟ್‌ ಆತನನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಸದ್ಯ ಲಭ್ಯವಾಗಿರುವ ಮಾಹಿತಿಯಂತೆ, ಸಾಹಿಲ್ ಯುವಕ ಮೊಮೀನ್ ಎಂಬಾತ ಕೆಲ ವರ್ಷಗಳ ಕಾಲ ದುಬೈ ಹಾಗೂ ಥೈಲ್ಯಾಂಡ್‌ನಲ್ಲಿ ಉದ್ಯೋಗ ಮಾಡಿದ್ದು, ಸುಮಾರು 25 ದಿನಗಳ ಹಿಂದೆ ನೇಪಾಳದ ಝಾಪಾ ಜಿಲ್ಲೆಯ ದಮಕದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಕೆಲಸಕ್ಕೆ ಸೇರಿದ್ದ ಎನ್ನಲಾಗಿದೆ‌. ಅಲ್ಲಿಯೇ ಸದ್ದಾಂ ಹುಸೇನ್ ಎಂಬ ವ್ಯಕ್ತಿಯೊಂದಿಗೆ ಒಂದೇ ಕೊಠಡಿಯಲ್ಲಿ ಮೊಮಿನ್ ವಾಸವಿದ್ದ ಎನ್ನಲಾಗಿದೆ‌. 

ಘಟನೆಯ ಹಿಂದಿನ ದಿನ ಸಾಹಿಲ್ ಬೆಳಗಾವಿಯಲ್ಲಿದ್ದ ತಮ್ಮ ಸ್ನೇಹಿತನೊಬ್ಬನನ್ನು ಅದೇ ಹೋಟೆಲ್‌ನಲ್ಲಿ ಉದ್ಯೋಗಕ್ಕಾಗಿ ಕರೆಸಿಕೊಂಡಿದ್ದ ಎನ್ನಲಾಗಿದೆ‌.

ರಾತ್ರಿ ಮೂವರೂ ಒಂದೇ ಕೊಠಡಿಯಲ್ಲಿ ಮಲಗಿದ್ದ ವೇಳೆ ಸಾಹಿಲ್ ಹಾಗೂ ಸದ್ದಾಂ ನಡುವೆ ವಾಗ್ವಾದ ನಡೆದಿತ್ತು. ಸ್ನೇಹಿತ ಮಧ್ಯಸ್ಥಿಕೆ ವಹಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದ ಎನ್ನಲಾಗಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೃಷಿಕನ ಬದುಕಿನ ಆಸರೆ ಎತ್ತುಗಳ ಪೂಜೆ : ಉತ್ತರ ಕರ್ನಾಟಕದ ಮಣ್ಣಿನ ಗುಳ್ಳವ್ವನ ಹಬ್ಬ ಯುವತಿಗೆ ಸೋದರಮಾವನೊಂದಿಗೆ ಬಲವಂತದ ಮದುವೆ : ಯುವತಿ ಆತ್ಮಹತ್ಯೆ, ಗಂಡನೂ ಆತ್ಮಹತ್ಯೆ ನೇಪಾಳದಲ್ಲಿ ಬೆಳಗಾವಿ ಯುವಕನ ಬರ್ಬರ ಹತ್ಯೆ : ಜೊತೆಗಿದ್ದ ರೂಮ್‌ಮೇಟ್‌ ನಿಂದ ಕೊಲೆ ಮದುವೆಯಾಗಿ ನಾಲ್ಕೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆಬೆಳಗಾವಿಯಲ್ಲಿ ಘೋರ ದುರಂತ : ನೇಣು ಬಿಗಿದುಕೊಂಡು ಮಗುವಿನ ಜೊತೆ ತಾಯಿ ಆತ್ಮಹತ್ಯೆಮನೆ ಮೇಲ್ಮುದ್ದೆ ಕುಸಿದು ಇಬ್ಬರು ಕಾರ್ಮಿಕರ ದುರ್ಮರಣಪಶು ಆಸ್ಪತ್ರೆ ಮುಂದೆ ಬಹಿರಂಗ ಶೌಚ: ಸುಣಧೋಳ ಗ್ರಾಮದಲ್ಲಿ ಗಂಭೀರ ಸ್ವಚ್ಛತಾ ಸಮಸ್ಯೆ ಬಿಜೆಪಿ ಪಕ್ಷದ ನೂತನ ಕಛೇರಿಯ ಭೂಮಿ ಪೂಜೆಬ್ಯಾಂಕಾಕ್ ನ ಪಬ್ ನಲ್ಲಿ ಭೀಕರ ಅಗ್ನಿ ಅವಘಡ: ಕನಿಷ್ಠ 27 ಜನ ಸಜೀವ ದಹನ ಮನೆ ರಿಪೇರಿ ಮಾಡುತ್ತಿದ್ದ ವೇಳೆ ಛಾವಣಿ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಸಾವು