Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಮೊದಲು : ಧಾರವಾಡದಲ್ಲಿ ಬೃಹತ್ ಸಂವಿಧಾನ ಪೀಠಿಕೆ ನಿರ್ಮಾಣ 

Advertisement
ಧಾರವಾಡ : ಭಾರತದ ಸಂವಿಧಾನ ರಚಿಸಿರುವ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ 134 ನೇ ಜಯಂತಿ ಅಂಗವಾಗಿ ಧಾರವಾಡ ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಸಹಯೋಗದಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಭಾರತ ಸಂವಿಧಾನದ ಪೀಠಿಕೆಯ ಬೃಹತ್ ಲೋಹದ ಪ್ರತಿಯನ್ನು ಸಂವಿಧಾನ ಪುಸ್ತಕ ರೀತಿಯಲ್ಲಿ ನಿರ್ಮಿಸಿ, ನಗರದ ಪ್ರಸಿದ್ದ ರಾಣಿ ಕಿತ್ತೂರು ಚನ್ನಮ್ಮ ಉದ್ಯಾನವನದಲ್ಲಿ ಇಂದು ಬೆಳಿಗ್ಗೆ ಸಚಿವ ಸಂತೋಷ ಲಾಡ್ ಅವರಿಂದ ಲೋಕಾರ್ಪಣೆ ಮಾಡಲಾಯಿತು.

ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಲೋಹದಲ್ಲಿ ರಚಿತ ಪೀಠಿಕೆಯನ್ನು ಲೋಕಾರ್ಪಣೆ ಮಾಡಿ, ಗೌರವ ಸಲ್ಲಿಸಿ, ಸಂತಸ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಮಹಾನಗರಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ ಅವರು ಲೋಹದಿಂದ ರಚಿತ ಸಂವಿಧಾನ ಪೀಠಿಕೆಯ ವಿಶೇಷತೆಗಳನ್ನು ಹಾಗೂ ಅನುಕೂಲತೆಗಳನ್ನು ವಿವರಿಸಿದರು.

ಸಂವಿಧಾನ ಪೀಠಿಕೆಯ ಬೃಹತ್ ಲೋಹದ ಪ್ರತಿ ವಿಶೇಷತೆ

ಈ ಪೀಠಿಕೆ ರಚನೆಯು ವಿಶೇಷವಾದ ಕಲಾತ್ಮಕ ಕೌಶಲ್ಯವನ್ನು ಪ್ರದರ್ಶಿಸುತ್ತದೆ. ಉನ್ನತ ದರ್ಜೆಯ ವಸ್ತುಗಳನ್ನು ಬಳಸಿ ಸೂಕ್ಷ್ಮವಾಗಿ ತಯಾರಿಸಲಾಗಿದ್ದು, ಇದು ತನ್ನ ಸೌಂದರ್ಯದ ಕಲಾತ್ಮಕ ಆಕರ್ಷಣೆ ಮತ್ತು ರಚನಾತ್ಮಕ ಸಮಗ್ರತೆಯನ್ನು ಪ್ರದರ್ಶಿಸುತ್ತಿದೆ.

ತೆರೆದ ಪುಸ್ತಕದ ರೂಪದಲ್ಲಿ ವಿನ್ಯಾಸಗೊಳಿಸಲಾದ ಈ ಶಿಲ್ಪವು 2 mm SS 304 ಸ್ಟೇನ್ಲೆಸ್ ಸ್ಟೀಲ್ನ ಹೊರ ಹೊದಿಕೆಯನ್ನು ಬಫ್ಡ್ ಮ್ಯಾಟ್ ಫಿನಿಶ್ನೊಂದಿಗೆ ಹೊಂದಿದೆ, ಇದು ಸಂಸ್ಕರಿಸಿದ ಮತ್ತು ಸೊಗಸಾದ ನೋಟವನ್ನು ನೀಡುತ್ತದೆ.

ಶಿಲ್ಪದ ಮುಂಭಾಗದ ಪುಟಗಳು ಭಾರತದ ಸಂವಿಧಾನದ ಪೀಠಿಕೆಯನ್ನು ಹೈಲೈಟ್ ಮಾಡುತ್ತವೆ, ಇದನ್ನು ಇಂಗ್ಲಿಷ್ ಮತ್ತು ಕನ್ನಡ ಎರಡರಲ್ಲೂ ಕೆತ್ತಲಾಗಿದೆ.

 

.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ