LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಒಳ ಮೀಸಲು ವಿರೋಧಿಸಿ 25ರಂದು ಬೆಂಗಳೂರು ಚಲೋ

Advertisement
ಭಾಲ್ಕಿ: ನ್ಯಾಯಮೂರ್ತಿ ನಾಗಮೋಹನ್ ದಾಸ ವರದಿಯನ್ನು ಧಿಕ್ಕರಿಸಿ ಪ.ಜಾ ಬಲಗೈ ಸಮುದಾಯದ ಮುಖಂಡರು ಮಾ.25ರಂದು ಬೆಂಗಳೂರಿನಲ್ಲಿ ಜ್ಞಾನ ಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಷ.ಜಾ ಬಲಗೈ ಸಮುದಾಯ ಒಕ್ಕೂಟದ ಮುಖಂಡರು ತಿಳಿಸಿದರು.

https://youtu.be/Zv-7KnnoQEY

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಪ್ರತಿಭಟನಾ ಸಮಾವೇಶದ ಕರಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು.ರಾಜ್ಯ ಸರ್ಕಾರವು ಶೇ.17+7ರ ಮೀಸಲಾತಿ ಪ್ರಮಾಣಕ್ಕೆ ರಾಜ್ಯ ಉಚ್ಚನ್ಯಾಯಾಲಯವು ತಡೆಯಾಜ್ಞೆ ನೀಡಿದ್ದು ಸಾಮಾನ್ಯ ವರ್ಗದವರು ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬೇಕೆಂದು ಹೋರಾಟ ರೂಪಿಸಿದ ಹಿನ್ನೆಲೆಯಲ್ಲಿ ಫೆ.27ರಂದು ಶೇ.15+3ರ ಪ್ರಮಾಣದಲ್ಲಿ ಒಳಮೀಸಲಾತಿ ರಹಿತ ನೇಮಕ ಮಾಡಲು ಆದೇಶ ಹೊರಡಿಸಿ ಗೆಜೆಟ್‌ನಲ್ಲಿ ಪಕಟಿಸಿರುತ್ತದೆ. ಆದರೆ, 101 ಜಾತಿಗಳಲ್ಲಿ ಒಂದು ಸಮುದಾಯವು ಶೇ.15+3 ಮೀಸಲಾತಿಯಲ್ಲಿ ಒಳಮೀಸಲಾತಿ ಅಳವಡಿಸಬೇಕೆಂದು ಹೋರಾಟ ಮಾಡುತ್ತಿರುವ ಹಿನ್ನೆಲೆ ಮಾ.27ರಂದು ಎ ರಾಜ್ಯ ಸಚಿವ ಸಂಪುಟದ ವಿಶೇಷ ಸಭೆ ಏರ್ಪಡಿಸಲಾಗಿದ್ದು, ಸದರಿ ಸಭೆಯಲ್ಲಿ ಶೇ 15 + 30 ಮೀಸಲಾತಿಯಲ್ಲಿ ಒಳಮೀಸಲಾತಿ ಅಳವಡಿಸಬಾರದೆಂದು ತಪ್ಪಿದ್ದಲ್ಲಿ ಮುಂದೆ ಆಗುವ ಎಲ್ಲಾ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ವಿಶ್ವನಾಥ ಮೋರೆ, ಲಕ್ಷ್ಮಣ ಗುಪ್ತ, ಪ್ರದೀಪ್ ಜಂಜಿರೆ, ಕೀರ್ತಿರತನ್ ಸೋನಾಳೆ, ರಾಜಕುಮಾರ್‌ಮೋರೆ, ಪ್ರಶಾಂತ್ ಕೋಟಗಿರ, ವಿಲಾಸ್ ಮೋರೆ, ಮನೋಹರ್‌ಂತಪುರೆ ಇನ್ನು ಅನೇಕ ಬಲಗೈ ಸಮುದಾಯದ ಮುಖಂಡರು ಇದ್ದರು.

ವರದಿ : ಸಂತೋಷ ಬಿಜಿ ಪಾಟೀಲ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು