ಭಾಲ್ಕಿ: ನ್ಯಾಯಮೂರ್ತಿ ನಾಗಮೋಹನ್ ದಾಸ ವರದಿಯನ್ನು ಧಿಕ್ಕರಿಸಿ ಪ.ಜಾ ಬಲಗೈ ಸಮುದಾಯದ ಮುಖಂಡರು ಮಾ.25ರಂದು ಬೆಂಗಳೂರಿನಲ್ಲಿ ಜ್ಞಾನ ಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಷ.ಜಾ ಬಲಗೈ ಸಮುದಾಯ ಒಕ್ಕೂಟದ ಮುಖಂಡರು ತಿಳಿಸಿದರು.
https://youtu.be/Zv-7KnnoQEY
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಪ್ರತಿಭಟನಾ ಸಮಾವೇಶದ ಕರಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು.ರಾಜ್ಯ ಸರ್ಕಾರವು ಶೇ.17+7ರ ಮೀಸಲಾತಿ ಪ್ರಮಾಣಕ್ಕೆ ರಾಜ್ಯ ಉಚ್ಚನ್ಯಾಯಾಲಯವು ತಡೆಯಾಜ್ಞೆ ನೀಡಿದ್ದು ಸಾಮಾನ್ಯ ವರ್ಗದವರು ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬೇಕೆಂದು ಹೋರಾಟ ರೂಪಿಸಿದ ಹಿನ್ನೆಲೆಯಲ್ಲಿ ಫೆ.27ರಂದು ಶೇ.15+3ರ ಪ್ರಮಾಣದಲ್ಲಿ ಒಳಮೀಸಲಾತಿ ರಹಿತ ನೇಮಕ ಮಾಡಲು ಆದೇಶ ಹೊರಡಿಸಿ ಗೆಜೆಟ್ನಲ್ಲಿ ಪಕಟಿಸಿರುತ್ತದೆ. ಆದರೆ, 101 ಜಾತಿಗಳಲ್ಲಿ ಒಂದು ಸಮುದಾಯವು ಶೇ.15+3 ಮೀಸಲಾತಿಯಲ್ಲಿ ಒಳಮೀಸಲಾತಿ ಅಳವಡಿಸಬೇಕೆಂದು ಹೋರಾಟ ಮಾಡುತ್ತಿರುವ ಹಿನ್ನೆಲೆ ಮಾ.27ರಂದು ಎ ರಾಜ್ಯ ಸಚಿವ ಸಂಪುಟದ ವಿಶೇಷ ಸಭೆ ಏರ್ಪಡಿಸಲಾಗಿದ್ದು, ಸದರಿ ಸಭೆಯಲ್ಲಿ ಶೇ 15 + 30 ಮೀಸಲಾತಿಯಲ್ಲಿ ಒಳಮೀಸಲಾತಿ ಅಳವಡಿಸಬಾರದೆಂದು ತಪ್ಪಿದ್ದಲ್ಲಿ ಮುಂದೆ ಆಗುವ ಎಲ್ಲಾ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ವಿಶ್ವನಾಥ ಮೋರೆ, ಲಕ್ಷ್ಮಣ ಗುಪ್ತ, ಪ್ರದೀಪ್ ಜಂಜಿರೆ, ಕೀರ್ತಿರತನ್ ಸೋನಾಳೆ, ರಾಜಕುಮಾರ್ಮೋರೆ, ಪ್ರಶಾಂತ್ ಕೋಟಗಿರ, ವಿಲಾಸ್ ಮೋರೆ, ಮನೋಹರ್ಂತಪುರೆ ಇನ್ನು ಅನೇಕ ಬಲಗೈ ಸಮುದಾಯದ ಮುಖಂಡರು ಇದ್ದರು.
ವರದಿ : ಸಂತೋಷ ಬಿಜಿ ಪಾಟೀಲ

