Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಣೇಶೋತ್ಸವದಲ್ಲಿ ಮನಸೆಳೆದ ಧೇನುಪುರಿ ತಂಡದಿಂದ ಭಜನೆ

Advertisement
ತುರುವೇಕೆರೆ : ಪಟ್ಟಣದ ಮುತ್ತುರಾಯನಗರದಲ್ಲಿ ನಾಗರೀಕ ವೇದಿಕೆ ಆಯೋಜಿಸಿದ್ದ 14 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಧೇನುಪುರಿ ಭಜನಾ ಮಂಡಳಿಯವರು ವಿಶೇಷವಾಗಿ ದೇವರ ಸಂಕೀರ್ತನೆ, ಗಣಪತಿ, ಶ್ರೀರಾಮ, ಆಂಜನೇಯನ ಭಜನಾ ಹಾಡುಗಳನ್ನು ಹಾಡುವ ಮೂಲಕ ನೆರೆದಿದ್ದ ಭಕ್ತವೃಂದದ ಮನೆಸಳೆದರು.

ಭಾದ್ರಪದ ಶುಕ್ಲ ಚತುರ್ಥಿಯಂದು ಗಣಪತಿಯನ್ನು ಪ್ರತಿಷ್ಠಾಪಿಸಿ ಮಹಾಗಣಪತಿ ಹೋಮ, ಪೂರ್ಣಾಹುತಿ, ಮಹಾಮಂಗಳಾರತಿ ನೆರವೇರಿಸಿ ಪ್ರಸಾದ ವಿತರಿಸಲಾಯಿತು. ಬರಹಗಾರ ತುರುವೇಕೆರೆ ಪ್ರಸಾದ್ ಅವರಿಂದ ಉಪನ್ಯಾಸ, ಶಿವಶಕ್ತಿ ನಾಟ್ಯಕಲಾ ತಂಡದವರಿಂದ ಭರತನಾಟ್ಯ, ಶ್ರೀನಿವಾಸ ಭಜನಾ ಮಂಡಳಿಯಿಂದ ಭಜನೆ ಹಾಗೂ ಸಾರ್ವಜನಿಕರಿಂದ ಸಾರ್ವಜನಿಕರಿಗೆ ಅನ್ನದಾನ, ಭೂಕೈಲಾಸ ಹರಿಕಥೆ ಸೇರಿದಂತೆ ಹಲವು ವಿಶೇಷಚ ಕಾರ್ಯಕ್ರಮವನ್ನು ಗಣೇಶೋತ್ಸವದಲ್ಲಿ ನಡೆಸಲಾಯಿತು. ಒಂದು ವಾರ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಗಾಗಿ ಪ್ರತಿನಿತ್ಯ ಸಂಜೆ ಆಟೋಟ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು.



ಅಂತಿಮ ದಿನ ಮಂಗಳವಾದ್ಯ, ವೀರಗಾಸೆ, ನಾಸಿಕ್ ಡೋಲ್, ಚಿಟ್ಟಿಮೇಳ, ಕೀಲುಕುದುರೆ ಉತ್ಸವ, ಗೊಂಬೆ ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳೊಂದಿಗೆ ಶ್ರೀ ಸತ್ಯಗಣಪತಿ ಮತ್ತು ಶ್ರೀ ಭದ್ರಕಾಳಿ ಸಮೇತ ಶ್ರೀ ವೀರಭದ್ರೇಶ್ವರಸ್ವಾಮಿಯವರನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಿ, ಶ್ರೀ ಸತ್ಯಗಣಪತಿ ಸ್ವಾಮಿಯನ್ನು ಭಕ್ತಿಶ್ರದ್ಧೆಗಳಿಂದ ವಿಸರ್ಜನೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಿವಶಕ್ತಿ ಕಲಾವಿದರು ಸಂಸ್ಥೆಯ ಅಧ್ಯಕ್ಷ ಅಮಾನಿಕೆರೆ ಮಂಜುನಾಥ್, ಧೇನುಪುರಿ ಭಜನಾ ಮಂಡಳಿಯ ಸೀತಾಲಕ್ಷ್ಮೀ, ಉಮಾಮಂಜುನಾಥ್, ಸುಶೀಲಾಶಂಕರಮೂರ್ತಿ, ಪಪಂ ಸದಸ್ಯ ಮಧು, ಮುತ್ತುರಾಯನಗರ ನಾಗರೀಕ ವೇದಿಕೆಯ ವಕೀಲ ಕೆ.ನಾಗೇಶ್, ಜಯಂತ್, ಪ್ರಜ್ವಲ್ ಸೇರಿದಂತೆ ಮುತ್ತುರಾಯನಗರದ ನಾಗರೀಕರು, ಧೇನುಪುರಿ ಭಜನಾ ಮಂಡಳಿಯ ಸದಸ್ಯರುಗಳು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ