Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರಣ್ಯ ಇಲಾಖೆಯಿಂದ ತಳೆವಾಡಿ ಗ್ರಾಮದ ಜನತೆಗೆ ಸಿಕ್ತು Big ಗಿಫ್ಟ್

Advertisement
ಖಾನಾಪುರ: ಹೌದು ಅರಣ್ಯ ಇಲಾಖೆ ವತಿಯಿಂದ ಇಂದು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಪ್ರಕೃತಿ ಶಿಬಿರದಲ್ಲಿ ಏರ್ಪಡಿಸಿದ್ದ ತಳೆವಾಡಿ ಗ್ರಾಮದ ಜನರ ಒಕ್ಕೊರಲ ಸ್ವ- ಇಚ್ಛಾ ಪುನರ್ವಸತಿ ಯೋಜನೆಯಡಿ ಆಯ್ದ 27 ಕುಟುಂಬಗಳಿಗೆ 15 ಲಕ್ಷಗಳ ಪರಿಹಾರ ಘೋಷಣೆಯಾಗಿ, ಮೊದಲನೇ ಕಂತಿನಲ್ಲಿ ಇಂದು 10 ಲಕ್ಷಗಳ ಚೆಕ್ ಅನ್ನು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಖಾನಾಪುರ ಶಾಸಕ ವಿಠಲ ಹಲಗೇಕರ್, ನೇರಸೆ ಗ್ರಾ.ಪಂ ಅಧ್ಯಕ್ಷೆ ಬೀಬಿ ಜಾನ್ ಮುಲ್ಲಾ ರವರಿಂದ ವಿತರಣೆ ಮಾಡಲಾಯಿತು.

[video width="848" height="478" mp4="https://bharathvaibhav.com/wp-content/uploads/2025/05/WhatsApp-Video-2025-05-17-at-5.36.43-PM.mp4"][/video]

ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮಹಮದ್ ರೋಷನ್, ಎಸ್.ಪಿ ಬೀಮಾಶಂಕರ ಗುಳೇದ್, ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಆದ ಸುಭಾಷ್ ಮಲ್ಪಡೆ ಹಾಗೂ ರಾಧದೇವಿ , ಮಂಜುನಾಥ್ ಚೌಹಾಣ್, ಗ್ಯಾರಂಟಿ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ, ಶ್ರೀ ಮರಿಯ ಕ್ರಿಸ್ತು ರಾಜಾ ಸೇರಿದಂತೆ ಎಲ್ಲಾ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳು, ಸುತ್ತಮುತ್ತಲ ಅರಣ್ಯ ವಾಸಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಈ ಕಾರ್ಯಕ್ರಮವನ್ನು ಸಸಿಗೆ ನೀರು ಎರೆದು ಉದ್ಘಾಟನೆ ಮಾಡಿದ ಗಣ್ಯರು ಫಲಾನುಭವಿಗಳಿಗೆ ಚೆಕ್ ವಿತರಣೆ ಮಾಡಿ ಅರಣ್ಯ ವಾಸಿಗಳ ಹಿತಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು. ಇನ್ನೊಂದು ಕಡೆ ಖಾನಾಪುರ ಶಾಸಕ ವಿಠಲ ಹಲಗೇಕರ್ ಮಾತನಾಡಿ ಜನರಿಗೆ ಮನೆಕಟ್ಟಿಕೊಳ್ಳಲು ಸರ್ಕಾರದಿಂದ ಜಮೀನು ನೀಡುವಂತೆ ಒತ್ತಾಯ ಮಾಡಿದರು.

ನಂತರ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಅವರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅರಣ್ಯ ಇಲಾಖೆ ಸಚಿವ ಈಶ್ವರ್ ಕಂಡ್ರೆ ಅರಣ್ಯವಾಸಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕೊಟ್ಟು ಮುಖ್ಯ ವಾಹಿನಿಗೆ ತೆಗೆದುಕೊಂಡು ಬರುವುದೇ ನಮ್ಮ ಗುರಿ ಎಂದು ಹೇಳಿದರು. ಒಟ್ಟಾರೆ ಶತಮಾನಗಳಿಂದ ಅರಣ್ಯದಲ್ಲಿ ವಾಸ ಮಾಡುತ್ತಿದ್ದ ತಳೆವಾಡಿ ಗ್ರಾಮಸ್ಥರಿಗೆ ಅಂತೂ ಇಂತೂ ಪರಿಹಾರ ಸಿಕ್ತು.

ವರದಿ: ಶ್ರೀ ಬಸವರಾಜು
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ