Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ 

Advertisement
ಬೆಂಗಳೂರು : ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರು ಅಂಕಿತ ಬಿದ್ದಿದೆ. ರಾಜ್ಯದಲ್ಲಿ ಹೆಚ್ಚಾಗಿದ್ದ ಮೈಕ್ರೋ ಫೈನಾನ್ಸ್ ಹಳಲಿಗೆ ಬ್ರೇಕ್ ಹಾಕುವ ಸಲುವಾಗಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆಗೆ ಅಂತಿಮವಾಗಿ ರಾಜ್ಯಪಾಲರು ಸಹಿ ಹಾಕಿದ್ದಾರೆ.ಆ ಮೂಲಕ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರದ ಸುಗ್ರೀವಜ್ಞೆ ಅಸ್ತ್ರ ಪ್ರಯೋಗ ಯಶಸ್ವಿಯಾಗಿದೆ.

ಮೈಕ್ರೋ ಫೈನಾನ್ಸ್ ಆಟಾಟೋಪಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಸುಗ್ರೀವಜ್ಞೆ ಹೊರಡಿಸಿದ ನಂತರ ಯಾವುದೇ ಕಾನೂನಾತ್ಮಕ ತೊಡಕುಗಳು ಉಂಟಾಗಬಾರದು ಎಂಬ ಕಾರಣಕ್ಕೆ ಹೆಚ್ಚಿನ ಸಮಯ ಪಡೆದುಕೊಂಡು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅನತಿಯಂತೆ ಅಳೆದು ತೂಗಿ, ಕಾನೂನು ಪಂಡಿತರ ಪರಾಮರ್ಷೆಗೆಒಳಪಡಿಸಿ ಈ ಕರಡು ಸಿದ್ಧಪಡಿಸಲಾಗಿತ್ತು.

ಆದ್ರೆ ಮೊದಲ ಬಾರಿ ಈ ಕರಡನ್ನು ರಾಜ್ಯಪಾಲರ ಸಹಿಗೆ ಕಳುಹಿಸಿದಾಗ, ಈ ಬಿಲ್ ನಲ್ಲಿ ಸಾಲ ನೀಡಿದವರಿಗೆ ಯಾವುದೇ ರಕ್ಷಣೆ ಕಂಡುಬರುತ್ತಿಲ್ಲ ಎಂಬ ಅಂಶವನ್ನು ಮನಗಂಡ ರಾಜ್ಯಪಾಲರು, ಕೆಲವು ಕಾರಣಗಳನ್ನು ನೀಡಿ ಸಹಿ ಹಾಕಲು ನಿರಾಕರಿಸಿ ಹಿಂತಿರುಗಿಸಿದ್ದರು.

ಆ ಎಲ್ಲಾ ಲೋಪದೋಷಗಳನ್ನು ಸರಿ ಪಡಿಸಿದ ನಂತರ ಮತ್ತೊಮೆ ರಾಜ್ಯಪಾಲರ ಅಂಗಳಕ್ಕೆ ಸುಗ್ರೀವಜ್ಞೆ ಆದೇಶದ ಪ್ರತಿಯನ್ನು ಕಳುಹಿಸಲಾಗಿತ್ತು. ಅಂತಿಮವಾಗಿ ಇಂದು ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್ ಅಸ್ತು ಎಂದಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ