ಕೊಪ್ಪಳ : ಕೊಪ್ಪಳದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಟಾಟಾ ಏಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮೂವರು ಸವಾರರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪ ರಾಷ್ಟ್ರೀಯ ಹೆದ್ದಾರಿ 67 ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ.
ಮೃತಪಟ್ಟ ಮೂವರು ಗದಗ ಜಿಲ್ಲೆಯ ನರಗುಂದ ಮೂಲದವರು ಎಂದು ತಿಳಿದುಬಂದಿದೆ. ನರಗುಂದದಿಂದ ಕೊಪ್ಪಳಕ್ಕೆ ಬರುತ್ತಿದ್ದ ವೇಳೆ ಈ ಒಂದು ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕುಕನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


