Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಲೂಕು ಜೆಡಿಎಸ್ ಇಂದ ಹೆಚ್.ಡಿ.ಕುಮಾರಸ್ವಾಮಿ ಜನ್ಮದಿನ ಆಚರಣೆ

Advertisement
ತುರುವೇಕೆರೆ : ತಾಲೂಕು ಜೆಡಿಎಸ್ ವತಿಯಿಂದ ಮಾಜಿ ಮುಖ್ಯಮಂತ್ರಿ, ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ 66 ನೇ ಹುಟ್ಟುಹಬ್ಬವನ್ನು ಬೃಹತ್ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ತಾಲೂಕು ಜೆಡಿಎಸ್ ಅಧ್ಯಕ್ಷ ದೊಡ್ಡೇಗೌಡ, ರಾಜ್ಯ ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ದೊಡ್ಡಾಘಟ್ಟ ಚಂದ್ರೇಶ್, ಶಾಸಕ ಎಂ.ಟಿ.ಕೃಷ್ಣಪ್ಪನವರ ಪುತ್ರ ವೆಂಕಟೇಶ್ ಕೃಷ್ಣಪ್ಪ ಹಾಗೂ ಗಣ್ಯರು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬದ ಸಂಭ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ವಕೀಲ ಪಿ.ಹೆಚ್.ಧನಪಾಲ್ ಮಾತನಾಡಿ, ಕುಮಾರಸ್ವಾಮಿಯವರು ನಾಡು ಕಂಡ ಅಪರೂಪದ ರಾಜಕಾರಣಿ. ಸರಳ, ಸಜ್ಜನಿಕೆ, ಸಹೋದರತ್ವದ ಹೃದಯ ಹೊಂದಿರುವ ಕುಮಾರಸ್ವಾಮಿಯವರು ಅಪಾರವಾದ ರೈತಪರ, ಜನಪರ ಕಾಳಜಿಯನ್ನು ಹೊಂದಿದ್ದಾರೆ. ಗ್ರಾಮ ವಾಸ್ತವ್ಯದ ಮೂಲಕ ಜನರ ಮನೆಬಾಗಿಲಿಗೆ ತೆರಳಿ ಅವರ ಕಷ್ಟಸುಖಗಳನ್ನು ಅರಿತು ಸ್ಥಳದಲ್ಲೇ ಸಮಸ್ಯೆ ಪರಿಹರಿಸಿದ, ರೈತರ ಸಾಲಮನ್ನಾ ಮಾಡಿದ ದೇಶದ ಮೊದಲ ಹಾಗೂ ಜನರಿಗೆ ಕೊಟ್ಟ ಮಾತಿನಂತೆ ಅಭಿವೃದ್ದಿ ಪಥದಲ್ಲಿ ರಾಜ್ಯವನ್ನು ಮುನ್ನಡೆಸಿದ ಏಕೈಕ ಮುಖ್ಯಮಂತ್ರಿ ನಮ್ಮ ಕುಮಾರಣ್ಣ ಎಂದು ಬಣ್ಣಿಸಿದರು.



ಹುಟ್ಟುಹಬ್ಬ ಆಚರಣೆಯ ನಂತರ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಸಾರ್ವಜನಿಕ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣುಹಂಪಲು, ಬ್ರೆಡ್ ವಿತರಿಸಿದರು. ಆಚರಣೆಯಲ್ಲಿ ಜೆಡಿಎಸ್ ಮುಖಂಡರಾದ ವೆಂಕಟೇಶ್ ಕೃಷ್ಣಪ್ಪ, ಎ.ಬಿ.ಜಗದೀಶ್, ಎನ್.ಆರ್.ಸುರೇಶ್, ಲೀಲಾವತಿಗಿಡ್ಡಯ್ಯ, ಎಂ.ಎನ್.ಚಂದ್ರೇಗೌಡ, ಹೆಚ್.ಎಸ್.ನಾಗರಾಜ್, ಕುಶಾಲ್ ಕುಮಾರ್, ವಿಜಯೇಂದ್ರಕುಮಾರ್, ಹೆಚ.ಆರ್.ರಾಮೇಗೌಡ, ವೆಂಕಟಾಪುರ ಯೋಗೀಶ್, ವಿಠಲದೇವರಹಳ್ಳಿ ಹರೀಶ್, ಮುದ್ದುಮಾರನಹಳ್ಳಿ ಶಿವಣ್ಣ, ಮಾದಿಹಳ್ಳಿ ಕಾಂತರಾಜು, ಆರ್.ಮಧು, ಟಿ.ಹೊಸಹಳ್ಳಿ ದೇವರಾಜ್, ಮಾರಪ್ಪನಹಳ್ಳಿ ದಿಲೀಪ್, ಬಡಗರಹಳ್ಳಿ ತ್ಯಾಗರಾಜ್, ಗೊಟ್ಟಿಕೆರೆ ಪ್ರಕಾಶ್ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ವರದಿ : ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ