Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಲೂಕು ಜೆಡಿಎಸ್ ಇಂದ ಹೆಚ್.ಡಿ.ಕುಮಾರಸ್ವಾಮಿ ಜನ್ಮದಿನ ಆಚರಣೆ

Advertisement
ತುರುವೇಕೆರೆ : ತಾಲೂಕು ಜೆಡಿಎಸ್ ವತಿಯಿಂದ ಮಾಜಿ ಮುಖ್ಯಮಂತ್ರಿ, ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ 66 ನೇ ಹುಟ್ಟುಹಬ್ಬವನ್ನು ಬೃಹತ್ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ತಾಲೂಕು ಜೆಡಿಎಸ್ ಅಧ್ಯಕ್ಷ ದೊಡ್ಡೇಗೌಡ, ರಾಜ್ಯ ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ದೊಡ್ಡಾಘಟ್ಟ ಚಂದ್ರೇಶ್, ಶಾಸಕ ಎಂ.ಟಿ.ಕೃಷ್ಣಪ್ಪನವರ ಪುತ್ರ ವೆಂಕಟೇಶ್ ಕೃಷ್ಣಪ್ಪ ಹಾಗೂ ಗಣ್ಯರು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬದ ಸಂಭ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ವಕೀಲ ಪಿ.ಹೆಚ್.ಧನಪಾಲ್ ಮಾತನಾಡಿ, ಕುಮಾರಸ್ವಾಮಿಯವರು ನಾಡು ಕಂಡ ಅಪರೂಪದ ರಾಜಕಾರಣಿ. ಸರಳ, ಸಜ್ಜನಿಕೆ, ಸಹೋದರತ್ವದ ಹೃದಯ ಹೊಂದಿರುವ ಕುಮಾರಸ್ವಾಮಿಯವರು ಅಪಾರವಾದ ರೈತಪರ, ಜನಪರ ಕಾಳಜಿಯನ್ನು ಹೊಂದಿದ್ದಾರೆ. ಗ್ರಾಮ ವಾಸ್ತವ್ಯದ ಮೂಲಕ ಜನರ ಮನೆಬಾಗಿಲಿಗೆ ತೆರಳಿ ಅವರ ಕಷ್ಟಸುಖಗಳನ್ನು ಅರಿತು ಸ್ಥಳದಲ್ಲೇ ಸಮಸ್ಯೆ ಪರಿಹರಿಸಿದ, ರೈತರ ಸಾಲಮನ್ನಾ ಮಾಡಿದ ದೇಶದ ಮೊದಲ ಹಾಗೂ ಜನರಿಗೆ ಕೊಟ್ಟ ಮಾತಿನಂತೆ ಅಭಿವೃದ್ದಿ ಪಥದಲ್ಲಿ ರಾಜ್ಯವನ್ನು ಮುನ್ನಡೆಸಿದ ಏಕೈಕ ಮುಖ್ಯಮಂತ್ರಿ ನಮ್ಮ ಕುಮಾರಣ್ಣ ಎಂದು ಬಣ್ಣಿಸಿದರು.



ಹುಟ್ಟುಹಬ್ಬ ಆಚರಣೆಯ ನಂತರ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಸಾರ್ವಜನಿಕ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣುಹಂಪಲು, ಬ್ರೆಡ್ ವಿತರಿಸಿದರು. ಆಚರಣೆಯಲ್ಲಿ ಜೆಡಿಎಸ್ ಮುಖಂಡರಾದ ವೆಂಕಟೇಶ್ ಕೃಷ್ಣಪ್ಪ, ಎ.ಬಿ.ಜಗದೀಶ್, ಎನ್.ಆರ್.ಸುರೇಶ್, ಲೀಲಾವತಿಗಿಡ್ಡಯ್ಯ, ಎಂ.ಎನ್.ಚಂದ್ರೇಗೌಡ, ಹೆಚ್.ಎಸ್.ನಾಗರಾಜ್, ಕುಶಾಲ್ ಕುಮಾರ್, ವಿಜಯೇಂದ್ರಕುಮಾರ್, ಹೆಚ.ಆರ್.ರಾಮೇಗೌಡ, ವೆಂಕಟಾಪುರ ಯೋಗೀಶ್, ವಿಠಲದೇವರಹಳ್ಳಿ ಹರೀಶ್, ಮುದ್ದುಮಾರನಹಳ್ಳಿ ಶಿವಣ್ಣ, ಮಾದಿಹಳ್ಳಿ ಕಾಂತರಾಜು, ಆರ್.ಮಧು, ಟಿ.ಹೊಸಹಳ್ಳಿ ದೇವರಾಜ್, ಮಾರಪ್ಪನಹಳ್ಳಿ ದಿಲೀಪ್, ಬಡಗರಹಳ್ಳಿ ತ್ಯಾಗರಾಜ್, ಗೊಟ್ಟಿಕೆರೆ ಪ್ರಕಾಶ್ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ವರದಿ : ಗಿರೀಶ್ ಕೆ ಭಟ್
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ