Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಶಾಲಿಯಾದ ಬಿಜೆಪಿಯ ಅಭ್ಯರ್ಥಿ

Advertisement
-------------------------------------------------ನಿಡಗುಂದಿ ಪಟ್ಟಣ ಪಂಚಾಯತಿಯ 5 ವಾರ್ಡನ ಉಪಚುನಾವಣೆ

ನಿಡಗುಂದಿ: ನಿಡಗುಂದಿ ಪಟ್ಟಣ ಪಂಚಾಯತಿಯ ಐದನೇ ವಾರ್ಡ್ ಅಭ್ಯರ್ಥಿಯ ಅಕಾಲಿಕ ಮರಣದಿಂದ ಉಪಚುನಾವಣೆ ನಡೆಸಲಾಗಿತ್ತು. 5ನೇ ವಾರ್ಡಿನ ಉಪಚುನಾವಣೆಯಲ್ಲಿ ತ್ರಿಕೋನ ಸ್ಪರ್ಧಿಗಳಿದ್ದರು, ಬಹಳ ಪೈಪೋಟಿ ತುರುಸಿನ ಚುನಾವಣೆಯಲ್ಲಿ ಆರು(6) ಮತಗಳ ಅಂತರದಿಂದ ವಿಜಯದ ಚುಕ್ಕಾಣೆ ಹಿಡಿದ ಭಾರತೀಯ ಜನತಾ ಪಾರ್ಟಿಯ.

ನಿಡುಗುಂದಿ ಪಟ್ಟಣದ ಐದನೇ ವಾರ್ಡ್ ಬಿಜೆಪಿಯ ಭದ್ರಕೋಟೆ, ಮತ್ತೊಮ್ಮೆ ಬಿಜೆಪಿಯ ಅಭ್ಯರ್ಥಿಯಾಗಿ ಈರಣ್ಣ ಗೋನಾಳ, ಆಯ್ಕೆಯಾಗಿದ್ದಾರೆ. ಪಟಾಕಿ ಸಿಡಿಸಿ ಸಿಹಿ ಹಂಚುವದರ ಜೊತೆಗೆ ವಿಜಯೋತ್ಸವವನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವರು ಶಾಸಕರಾದ ಎಸ್ ಕೆ ಬೆಳುಬ್ಬಿ ಅಭಿನಂದನೆಗಳನ್ನು ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿ ತ್ರಿಕೋನ ಸ್ಪರ್ಧೆಯಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ, ಎಷ್ಟೇ ಶತಗತ ಪ್ರಯತ್ನ ಪಟ್ಟರು,
ಐದನೇ ವಾರ್ಡಿನ ಕೆಲವು ಮತದಾರರನ್ನು ಅದಲು ಬದಲು ಮಾಡಿದರೂ, ಹಣ ಬಲ ಅಧಿಕಾರದ ಬಲ ಇದ್ದರೂ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯನ್ನು ಸೋಲಿಸಲು ಸಾಧ್ಯವಾಗಿಲ್ಲ.

ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಎರಡು ವರ್ಷದಲ್ಲಿ ವಿಫಲವಾಗಿದೆ, ಮಹಿಳೆಯರಿಗೆ ಹಿರಿಯ ನಾಗರಿಕರಿಗೆ ವಿದ್ಯಾರ್ಥಿಗಳಿಗೆ ಬಸ್ಸಿನ ಸೌಕರ್ಯ ಸರಿಯಾಗಿ ಸಿಗುತ್ತಿಲ್ಲ, ನಾಡಿನ ಜನರು ಗ್ಯಾರಂಟಿ ಯೋಜನೆ ಬಗ್ಗೆ ಹಿಡಿ ಶಾಪ ಹಾಕುತ್ತಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಭಾರತೀಯ ಜನತಾ ಪಾರ್ಟಿ ಸರಿಸುಮಾರು 150 ಅಭ್ಯರ್ಥಿಗಳಿಂದ ಆಯ್ಕೆಯಾಗಿ ಬಹುಮತ ಸಾಧಿಸಲಿದೆ ಎಂದು ಹೇಳಿದರು.

ವಿಜಯಪುರ ಜಿಲ್ಲೆಯ ಬಿಜೆಪಿಯ ನೂತನ ಅಧ್ಯಕ್ಷರಾದ ಗುರುಲಿಂಗಪ್ಪ ಅಂಗಡಿ, ಮಂಡಳ ಅಧ್ಯಕ್ಷರಾದ ಸಿದ್ದರಾಮಪ್ಪ ಕಾಕಂಡಕಿ, ಮಂಜುನಾಥ್,ಶಿವಾನಂದ ಅವಟಿ, ಬಾಬು ಮುಚ್ಚಂಡಿ, ಸಂಗಮೇಶ್ ಗೂಗಿಹಾಳ, ಪಟ್ಟಣ ಪಂಚಾಯಿತಿಯ ಬಿಜೆಪಿಯ ಸದಸ್ಯರು ಯುವ ಮುಖಂಡರು ಗುರು ಹಿರಿಯರು ಮಹಿಳೆಯರು ಸೇರಿದಂತೆ ಬಿಜೆಪಿಯ ಅಭಿಮಾನಿಗಳಿದ್ದರು.

ವರದಿ :ಅಲಿ ಮಕಾನದಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ