Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಕ್ತ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್

Advertisement
ಬೆಳಗಾವಿ: -ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು, ಬೃಹತ್ ಮೆರವಣಿಗೆ ಮ‌ೂಲಕ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುಂಚೆ ಬೃಹತ್ ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದಾರೆ.‌



ಬುಧವಾರ ಬೆಳಗಾವಿಯ ಸಮಾದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಸಮಾದೇವಿಗಲ್ಲಿಯಿಂದ ಆರಂಭವಾದ ಮೆರವಣಿಗೆಯ ಖಡೆಬಜಾರ ರೋಡ್, ಗಣಪತಿ ಗಲ್ಲಿ, ಕಾಕತಿವೇಸ್, ಶನಿವಾರ ಕೂಟ್, ಚನ್ನಮ್ಮ ವೃತ್ತ ಹಾಗೂ ಜಿಲ್ಲಾಧಿಕಾರಿ ಕಚೇರಿ ವರೆಗೆ ಸಾಗಿತು.‌ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮೆರವಣಿಗೆ ವಾಹನ ಏರಿದಾಗ ಅಭಿಮಾನಿಗಳು ಜಯ ಘೊಷಣೆ ಹಾಕಿದರು. ವಿವಿಧ ಭಾಗದಿಂದ ಬಂದಿದ ಕಾರ್ಯಕರ್ತರು ಮೋದಿ ಮೋದಿ ಎಂವ ಘೋಷಣೆಯೊಂದಿಗೆ ಉತ್ಸಾಹದಿಂದ ಮೆರವಣಿಗೆಯಲ್ಲಿ ಸಾಗಿದರು.

ಮೆರವಣಿಗೆಯಲ್ಲಿ ಗಮನ ಸೇಳೆದ ವಿವಿಧ ವಾದ್ಯಗಳು

ಜಗದೀಶ್ ಶೆಟ್ಟರ್ ಅವರು ನಾಮಪತ್ರಸಲ್ಲಿಸುವ ಮುಂಚೆ ಢೋಲ್ ತಾಶ್, ಡೊಳ್ಳು ಕುಣಿತ ವಾದ್ಯಗಳು ಎಲ್ಲರ ಗಮನ ಸೇಳೆದರು.‌ ವಿವಿಧ ಭಾಗದಿಂದ ಬಂದಿದ ಜನರು ವಾದ್ಯಗಳೊಂದಿಗೆ ಕುಣಿದು ಕುಪ್ಪಳಿಸಿದರು.‌ ಕೇಸರಿ ಪೇಟ್ ಧರಿಸಿದ ಸಾವಿರಾರು ಮಹಿಳೆಯರು ಮೆರವಣಿಗೆಯಲ್ಲಿ ಗಮನ ಸೇಳೆದರು.‌

ನಾಮಪತ್ರ ಸಲ್ಲಿಕೆಗೆ ನಾಯಕರ ಸಾಥ್

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ ಸಾವಂತ್, ಸಂಸದೆ ಮಂಗಳಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ್, ಬಾಲಚಂದ್ರ ಜಾರಕಿಹೊಳಿ, ದುರ್ಯೋಧನನ ಐಹೊಳೆ, ವಿಧಾನ ಪರಿಷತ್ ಸದಸ್ಯ ಹನಂಮತ್ ನೀರಾಣಿ. ಮಾಜಿ ಶಾಸಕರಾದ ಅನೀಲ ಬೆನಕೆ, ಮಾಜಿ ಸಚಿವ ಮುರಗೇಶ್ ನಿರಾಣಿ, ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಸೇರಿದಂತೆ ಲಕ್ಷಾಂತರ ಕಾರ್ಯಕರ್ತರು ಉಪಸ್ಥಿತರಿದ್ದರು.‌ವರದಿ ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ