LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ದೇಶದ ಜನರನ್ನು ಸಂಕಷ್ಟಕ್ಕೆ ನೂಕುವುದೇ ಬಿಜೆಪಿ ಸರ್ಕಾರದ ಕೆಲಸ: ಸಚಿವ ಪಾಟೀಲ್

Advertisement
ಕಲಬುರಗಿ: ಕೇಂದ್ರ ಸರ್ಕಾರ ದೇಶದ ಬಹುಜನರು ಬಳಸುವ ರೈಲುಗಳ ಪ್ರಯಾಣ ದರ ಏರಿಕೆ ಮಾಡಿ ತಾವು ಜನವಿರೋಧಿ ಎಂಬುದನ್ನು ಮತ್ತೆ ಸಾಬೀತು ಮಾಡಿದೆ ಎಂದು ಸೇಡಂ ಶಾಸಕರು ಹಾಗೂ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ ಅವರು ಇತ್ತೀಚೆಗೆ ಕೇಂದ್ರ ಸರ್ಕಾರ ರೈಲು ಪ್ರಯಾಣದ ದರ ಏರಿಕೆ ಕುರಿತು ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ರಾಜ್ಯದಲ್ಲಿ ರೈತರಿಗೆ ಅನುಕೂಲಕರವಾಗಲಿ ಎಂದು ಹಾಲಿನ ದರ ಹೆಚ್ಚಳ ಮಾಡಿದಾಗ ರಾಜ್ಯ ಬಿಜೆಪಿ ನಾಯಕರು ಆಕಾಶವೇ ಕಳಚಿ ಬಿದ್ದ ರೀತಿ ವಿರೋಧಿಸಿದರು. ಈಗ ಕೇಂದ್ರ ಸರ್ಕಾರ ರೈಲ್ವೆ ಟಿಕೆಟ್ ದರ ಏರಿಕೆ ಮಾಡಿ, ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತಿದ್ದರೂ ಏನೂ ಆಗಿಲ್ಲ ಎಂಬಂತೆ ಬಿಜೆಪಿ ನಾಯಕರು ಮೌನವಾಗಿದ್ದಾರೆ.

ಪೆಟ್ರೋಲ್, ಡೀಸೆಲ್ ಸೇರಿದಂತೆ ಅಡುಗೆ ಅನಿಲಗಳ ದರ ಗಗನಕ್ಕೆ ಏರಿಕೆಯಾಗಿದ್ದು, ಈಗ ರೈಲ್ವೆ ಟಿಕೆಟ್ ದರವೂ ಹೆಚ್ಚಾಗಿ ಜನ ಪರಿತಪಿಸುವಂತಾಗಿದೆ. ದೇಶದ ಜನರನ್ನು ಸಂಕಷ್ಟಕ್ಕೆ ನೂಕುವುದೆ ಬಿಜೆಪಿ ಸರ್ಕಾರದ ಕೆಲಸ. ಇಂತಹ ಜನವಿರೋಧಿ ನಡೆಯನ್ನು ಪಕ್ಷಗಳ ಹಂಗಿಲ್ಲದೆ ಎಲ್ಲಾ ನಾಯಕರು ಮತ್ತು ಸಾರ್ವಜನಿಕರು ಖಂಡಿಸಬೇಕು ಎಂದು ಅವರ ತಮ್ಮ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದಾರೆ.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ