Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಂಡಾಗಳ ಅಭಿವೃದ್ಧಿಗೆ ಬಿಜೆಪಿಯೇ ಕಾರಣ : ಬೊಮ್ಮಾಯಿ

Advertisement

ಹಾವೇರಿ: ಕಾಂಗ್ರೆಸ್ ನವರು ಲಂಬಾಣಿ ಸಮುದಾಯದ ಮೀಸಲಾತಿಯನ್ನು ಕಡಿಮೆ ಮಾಡಿದ್ದಾರೆ. ನಾನು ನಿಮ್ಮ ಸಹೋದರನಾಗಿ ಸಮುದಾಯಕ್ಕೆ ಸಿಗಬೇಕಾದ ನ್ಯಾಯಯುತ ಮೀಸಲಾತಿ ಕೊಡಿಸಲು ಬದ್ದನಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ..


ಅವರು ಇಂದು ಬಂಜಾರ ಸಮುದಾಯದ ಕೃಷ್ಣಾಪುರ ಮಠದ ಆವರಣದಲ್ಲಿ ಲಂಬಾಣಿ ಸಮುದಾಯದ ಸಮಾವೇಶ ಉದ್ಘಾಟಿಸಿ ಮಾತನಾಡಿದರು.


ಪ್ರಜಾಪ್ರಭುತ್ವದಲ್ಲಿ ಅತ್ಯಂತ ಕಟ್ಟಕಡೆಯ ಸಮಾಜದ ಧ್ವನಿ ಕೇಳಬೇಕು. ಅದು ಕೇಳಲು ಸಮಾಜ ಸಂಘಟನೆ ಆಗಬೇಕು. ಈ ಸಮಾಜ ದೇವರ ವರದಾನ ಇರುವ ಸಮಾಜ, ಸಂತ ಸೇವಾಲಾಲ್ ಅವರ ಅಶೀರ್ವಾದ ಇರುವ ಸಮಾಜ, ಅತ್ಯಂತ ಕಷ್ಟದಲ್ಲಿರುವ ಜನರು ನೀವು. ನೀವು ಬಹಳ ಕಷ್ಟಪಟ್ಟು ನಿಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿದ್ದೀರಿ, ಅವರಿಗೆ ಅವಕಾಶ ಕೊಟ್ಟರೆ ದೊಡ್ಡ ಸ್ಥಾನಗಳನ್ನು ಪಡೆಯುತ್ತಾರೆ. ಸರ್ಕಾರ ಕೈ ಹಿಡಿದರೆ ಈ ಸಮುದಾಯದ ಯುವಕರು ಉನ್ನತ ಸ್ಥಾನ ಪಡೆಯುತ್ತಾರೆ ಎಂದರು.


ದೇಶದ ಎಲ್ಲ ಭಾಗಗಳಲ್ಲಿ ಇರುವ ಕೆಲವೇ ಕೆಲವು ಸಮುದಾಯಗಳಲ್ಲಿ ಬಂಜಾರ ಸಮುದಾಯವೂ ಒಂದು. ಈ ಸಮುದಾಯ ಮುಂದೆ ಬರಲು ವಿದ್ಯೆ ಮತ್ತು ಉದ್ಯೋಗದಲ್ಲಿ ಅವಕಾಶ ದೊರೆಯಬೇಕು.


ಈ ಸಮುದಾಯ ಅಂಬೆಡ್ಕರ್ ಅವರನ್ಮು ನೆನಪಿಡಬೇಕು. ಅಂಬೇಡ್ಕರ್ ಅವರು ಎಸ್ಸಿ ಎಸ್ಟಿಗೆ ವಿಶೇಷ ಮೀಸಲಾತಿ ನೀಡಿ ಅವಕಾಶ ಕೊಟ್ಟರು. ಬಂಜಾರಾ ಸಮಾಜವನ್ನು ಎಸ್ಸಿಗೆ ಸೇರಿಸಿದ್ದು ದೇವರಾಜ ಅರಸರು. ಈ ರಾಜ್ಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರರು ದೇವರಾಜ ಅರಸರು ಮಾತ್ರ ಎಂದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ