Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಡುಗೊಲ್ಲರ ಸಂಘದಿಂದ ಬಿಜೆಪಿ ಅಧ್ಯಕ್ಷ ಪ್ರಕಾಶ್ ಯಾದವ್‌ ಗೆ ಸನ್ಮಾನ

Advertisement
ತುರುವೇಕೆರೆ : ತಾಲ್ಲೂಕು ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಪ್ರಕಾಶ್ ಯಾದವ್ ಅವರನ್ನು ತಾಲ್ಲೂಕು ಕಾಡುಗೊಲ್ಲರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಕಾಡುಗೊಲ್ಲರ ಸಂಘದ ಅಧ್ಯಕ್ಷ ಬಸವರಾಜ್, ಕಾಡುಗೊಲ್ಲರ ಸಮುದಾಯ ರಾಜ್ಯದ ಪ್ರಮುಖ ಬುಡಕಟ್ಟು ಜನಾಂಗವಾಗಿದೆ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಬಹಳ ಹಿಂದುಳಿದಿದೆ. ಸಮುದಾಯದ ಅಭಿವೃದ್ದಿಗೆ ಸರ್ಕಾರ ಕಾಡುಗೊಲ್ಲ ಅಭಿವೃದ್ದಿ ನಿಗಮ ಸ್ಥಾಪಿಸಿದ್ದರೂ ಅಂದುಕೊಂಡಂತೆ ಸಮುದಾಯದ ಪ್ರಗತಿ ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ ಅವರ ನೇತೃತ್ವದಲ್ಲಿ ಸಂಘವು ಸಮುದಾಯದ ಸಮಸ್ಯೆಗಳನ್ನು ಬಗೆಹರಿಸುವಂತೆ ಹಾಗೂ ಕಾಡುಗೊಲ್ಲರ ಜನಾಂಗವನ್ನು ಅಭಿವೃದ್ದಿಯ ಪಥದತ್ತ ಕೊಂಡೊಯ್ಯಲು ವಿಶೇಷ ಯೋಜನೆಗಳನ್ನು ರೂಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದರು.



ದೇಶದ ಚುಕ್ಕಾಣಿ ಹಿಡಿದಿರುವ ರಾಷ್ಟ್ರೀಯ ಪಕ್ಷವಾದ ಭಾರತೀಯ ಜನತಾ ಪಕ್ಷವು ಅತಿ ಹಿಂದುಳಿದ ಸಮುದಾಯವಾದ ಕಾಡುಗೊಲ್ಲರ ಜನಾಂಗದ ಪ್ರಕಾಶ್ ಯಾದವ್ ಅವರ ಸಂಘಟನಾ ಚಾತುರ್ಯ, ಪಕ್ಷ ನಿಷ್ಠೆಯನ್ನು ಗುರುತಿಸಿ ಪಕ್ಷದ ತುರುವೇಕೆರೆ ತಾಲ್ಲೂಕು ಮಂಡಲದ ಅಧ್ಯಕ್ಷರನ್ನಾಗಿ ನೇಮಿಸಿರುವುದು ಸಮುದಾಯಕ್ಕೆ ಬಹಳ ಸಂತೋಷ ತಂದಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರಿಗೆ, ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರಿಗೆ, ಕ್ಷೇತ್ರದ ಮಾಜಿ ಶಾಸಕರಾದ ಮಸಾಲಾ ಜಯರಾಮ್ ಅವರಿಗೆ ತುರುವೇಕೆರೆ ತಾಲ್ಲೂಕು ಕಾಡುಗೊಲ್ಲರ ಸಂಘದ ವತಿಯಿಂದ ಧನ್ಯವಾದಗಳನ್ನು ಅರ್ಪಿಸುವುದಾಗಿ ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ತಾಲ್ಲೂಕು ಬಿಜೆಪಿ ಅಧ್ಯಕ್ಷ ಪ್ರಕಾಶ್ ಯಾದವ್, ತುರುವೇಕೆರೆ ತಾಲೂಕು ಬಿಜೆಪಿ ಅಧ್ಯಕ್ಷನಾಗಿ ನೇಮಕವಾಗುವಲ್ಲಿ ಮಾಜಿ ಶಾಸಕರಾದ ಮಸಾಲಾ ಜಯರಾಮ್ ಅವರೇ ಪ್ರಮುಖ ಕಾರಣ. ನನ್ನ ಸಂಘಟನೆ, ಪಕ್ಷದಲ್ಲಿನ ನನ್ನ ಕೆಲಸವನ್ನು ಗುರುತಿಸಿ ಈ ಅವಕಾಶವನ್ನು ನೀಡಿದ್ದಾರೆ. ಪಕ್ಷ ಹಾಗೂ ಮಸಾಲಾ ಜಯರಾಮ್ ಅವರು ಕೊಟ್ಟ ಅಧಿಕಾರವನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ ಹಾಗೂ ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಹಗಲಿರುಳೆನ್ನದೆ ಶ್ರಮಿಸುತ್ತೇನೆ. ಕಾಡುಗೊಲ್ಲರ ಸಂಘ ನನ್ನನ್ನು ಸನ್ಮಾನಿಸಿ ಅಭಿನಂದಿಸಿರುವುದು ಬಹಳ ಸಂತೋಷ ತಂದಿದೆ. ಸಮುದಾಯದ ಅಭಿವೃದ್ದಿಗೆ ಅಗತ್ಯ ಸಹಕಾರವನ್ನು ನೀಡುತ್ತೇನೆ ಎಂದರು.



ಇದೇ ಸಂದರ್ಭದಲ್ಲಿ ರಾಜ್ಯ ಕಾಡುಗೊಲ್ಲರ ಸಂಘದ ದಿನದರ್ಶಿಕೆಯನ್ನು ಬಿಡುಗಡೆಗೊಳಿಸಲಾಯಿತು. ತಾಲೂಕು ಕಾಡುಗೊಲ್ಲರ ಸಂಘದ ಗೌರವಾಧ್ಯಕ್ಷ ದೊಡ್ಡೇಗೌಡರು, ಉಪಾಧ್ಯಕ್ಷರಾದ ಕುಮಾರ್, ಮಂಜು, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಕಾರ್ಯದರ್ಶಿ ಶಶಿ, ಹರೀಶ್, ಖಜಾಂಚಿ ಜುಂಜೇಗೌಡ, ಸಂಘಟನಾ ಕಾರ್ಯದರ್ಶಿ ತಿಮ್ಮೇಗೌಡ, ಸದಸ್ಯರಾದ ಕುಮಾರ್, ಶಂಕರಲಿಂಗಪ್ಪ, ಮಹೇಶ್, ರಮೇಶ್, ಪ್ರಸನ್ನ, ದೇವರಾಜ್, ಸಾನ್ವಿ ಸೇರಿದಂತೆ ಸಮುದಾಯದ ಬಾಂದವರಿದ್ದರು.

ವರದಿ: ಗಿರೀಶ್ ಕೆ ಭಟ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ