
ಭೂ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಅನುಮೋದನೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ ಕೆಲವೇ ಗಂಟೆಗಳ ನಂತರ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಗಳು ನಡೆದಿವೆ.

ಪಕ್ಷದ ಬಾವುಟ ಹಿಡಿದ ಕಾರ್ಯಕರ್ತರು ಸಿಎಂ ವಿರುದ್ಧ ಘೋಷಣೆ ಕೂಗಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ಮನವಿ ಮಾಡಿದರು.ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ನ್ಯೂಸ್ ಜೊತೆ ಮಾತನಾಡಿ, ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರ ಮೇಲಿನ ಆರೋಪಗಳನ್ನು ಬದಿಗೊತ್ತಿ ಹೈಕೋರ್ಟ್ ಆದೇಶವನ್ನು ಗೌರವಿಸಿ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಅವಕಾಶ ಮಾಡಿಕೊಡಬೇಕು ಒಳಗೆ
ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಚಿಕ್ಕೋಡಿ ಜಿಲ್ಲಾಧ್ಯಕ್ಷೆ ಸಂಭಾವನಿ ಅಶ್ವತ್ಪುರ ಮುಖಂಡ ಮಹೇಶ ಭಾತೆ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ :-ರಾಜು ಮುಂಡೆ

