Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಕ್ತದಾನಕ್ಕೆ ಪುನರ್ಜನ್ಮ ನೀಡುವ ಶಕ್ತಿಯಿದೆ : ಬಸವ ಭೂಷಣ ಶ್ರೀ.

Advertisement
ಸಿರುಗುಪ್ಪ : ಅಪಘಾತ, ರಕ್ತಹೀನತೆಯಿಂದ ಬಳಲುವವರಿಗೆ ರಕ್ತದಾನವು ಪುನರ್ಜನ್ಮ ನೀಡುವ ಶಕ್ತಿಯನ್ನು ಹೊಂದಿದೆ ಎಂದು ಗುರು ಬಸವ ಮಠದ ಶ್ರೀ ಬಸವಭೂಷಣ ಶ್ರೀ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ನಿಟ್ಟೂರು ನರಸಿಂಹಮೂರ್ತಿ ಬಯಲು ಜಾಗದಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ, ಜಿಲ್ಲಾ ಸೌಹಾರ್ಧ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಆಶೀವರ್ಚನ ನೀಡಿದ ಅವರು ಸೌಹಾರ್ದ ಸಂಘಗಳು ಇಂದು ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಮಾಜಕ್ಕೆ ಸಹಕಾರಿಯಾಗಿವೆ.

ಜೊತೆಗೆ ಜೀವಗಳನ್ನು ಉಳಿಸುವಂತಹ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳುವ ಮೂಲಕ ಜೀವದಾನದಂತಹ ಆರೋಗ್ಯ ಹಾಗೂ ಸಮಾಜಮುಖಿ ಕಾರ್ಯಗಳು ಆದರ್ಶನೀಯವಾಗಿ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ರಜತ ಮಹೋತ್ಸವದ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಕಾರ್ಯಕ್ರಮವನ್ನು ಸಿರಿ ಮಹಾಲಕ್ಷ್ಮಿ ಪತ್ತಿನ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷೆ ಹೆಚ್.ಜೆ.ಸುಧಾ ಅವರು ಉದ್ಘಾಟಿಸಿದರು.

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ನಿರ್ದೇಶಕ, ಶ್ರೀ ವಿಷ್ಣು ವಿಲಾಸ ಸೌಹಾರ್ದ ಸಹಕಾರಿಯ ಅಧ್ಯಕ್ಷ ಹೆಚ್.ಜೆ.ಹನುಮಂತಯ್ಯ ಅವರು ಮಾತನಾಡಿ ಎಲ್ಲಾ ಸಹಕಾರಿ ಪದಾಧಿಕಾರಿಗಳು, ದುರೀಣರ ಸಹಕಾರ ರಜತ ಮಹೋತ್ಸವ ಕಾರ್ಯಕ್ರಮದ ಯಶಸ್ವಿಗೆ ಪುಷ್ಠಿಯನ್ನು ನೀಡಿದೆಂದು ತಿಳಿಸಿದರು.

ಇದೇ ವೇಳೆ ಶಿವಶರಣೆ ನೀಲಾಂಬಿಕೆ ಸೌಹಾರ್ದ ಸಹಕಾರಿಯ ಅಧ್ಯಕ್ಷ ಪಂಪಾಪತಿಗೌಡ ಸೇರಿದಂತೆ, ಗಾದಿಲಿಂಗನೌಡ, ವಿರುಪಾಕ್ಷಿಗೌಡ, ಜಿ.ಬಿ.ಚೌದ್ರಿ, ಸೇರಿದಂತೆ ಇನ್ನಿತರ ಸಹಕಾರಿಗಳ ಪದಾಧಿಕಾರಿಗಳಾದ ಈರಣ್ಣ, ಯಾಡ್ಕಿ ಮಂಜುನಾಥ, ಕೃಷ್ಣಾರೆಡ್ಡಿ, ಬಿ.ಜೆ.ರಾಘವೇಂದ್ರಶೆಟ್ಟಿ ಸೇರಿದಂತೆ ನಿರ್ದೇಶಕರು, ಸಾರ್ವಜನಿಕರು ಇದ್ದರು.

ವರದಿ : ಶ್ರೀನಿವಾಸ ನಾಯ್ಕ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ