Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರ ಮಟ್ಟದಲ್ಲಿ ಮೂರು ಪ್ರತಿಷ್ಠಿತ ಪ್ರಶಸ್ತಿಗಳನ್ನ ಮುಡಿಗೇರಿಸಿಕೊಂಡ BMTC

Advertisement
ಬೆಂಗಳೂರು: ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಆಧುನಿಕತೆ ಮತ್ತು ಪರಿಸರ ಸ್ನೇಹಿ ಕ್ರಮಗಳಿಗೆ ಹೆಸರಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC) ರಾಷ್ಟ್ರ ಮಟ್ಟದಲ್ಲಿ ಮತ್ತೊಮ್ಮೆ ತನ್ನ ಮುಕುಟಕ್ಕೆ ಮೂರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.

ಹೈದರಾಬಾದ್‌ನಲ್ಲಿ ನಡೆದ 'ನ್ಯಾಷನಲ್ ಮೊಬೈಲಿಟಿ ಅವಾರ್ಡ್ಸ್-2026' ಕಾರ್ಯಕ್ರಮದಲ್ಲಿ ಸಂಸ್ಥೆಯ ಸಾಧನೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ.

ಯಾವ ವಿಭಾಗಗಳಲ್ಲಿ ಪ್ರಶಸ್ತಿ? ಡಿಜಿಟಲೀಕರಣ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯತ್ತ ಬಿಎಂಟಿಸಿ ಇಟ್ಟಿರುವ ದಿಟ್ಟ ಹೆಜ್ಜೆಗಳನ್ನು ಪರಿಗಣಿಸಿ ಈ ಕೆಳಗಿನ ಮೂರು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗಿದೆ:

ಅತ್ಯುತ್ತಮ ಸಾರ್ವಜನಿಕ ಸಾರಿಗೆ ಡಿಜಿಟಲೀಕರಣ ಉಪಕ್ರಮ: ತಂತ್ರಜ್ಞಾನದ ಬಳಕೆಯಲ್ಲಿ ಸಂಸ್ಥೆಯ ಮುನ್ನಡೆಗೆ ಸಂದ ಗೌರವ.

ವರ್ಷದ ಅತ್ಯುತ್ತಮ ಇವಿ (EV) ಕ್ಲೀನ್ ಫ್ಲೀಟ್ ಪರಿವರ್ತನೆ: ವಿದ್ಯುತ್ ಚಾಲಿತ ಬಸ್‌ಗಳ ಅಳವಡಿಕೆಯಲ್ಲಿ ತೋರಿದ ಸಾಧನೆಗಾಗಿ.

ನಾಗರೀಕರ ತೊಡಗಿಸಿಕೊಳ್ಳುವಿಕೆ - ಸಮಾವೇಶಿತ ಸಂಚಾರದಲ್ಲಿ ನವೀನತೆ: ಎಲ್ಲ ವರ್ಗದ ಜನರಿಗೆ ಸುಲಭ ಸಾರಿಗೆ ನೀಡುವಲ್ಲಿನ ಕ್ರಾಂತಿಕಾರಿ ಕ್ರಮಗಳಿಗಾಗಿ.

ಪ್ರಶಸ್ತಿ ಪ್ರದಾನ: ದಿನಾಂಕ 17 ಮಾರ್ಚ್ 2026 ರಂದು ಹೈದರಾಬಾದ್‌ನ ನೊವೋಟೆಲ್ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ 'ನ್ಯಾಷನಲ್ ಮೊಬೈಲಿಟಿ ಸಮಿಟ್ & ಅವಾರ್ಡ್ಸ್ - ತೆಲಂಗಾಣ 2026' ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಗಳನ್ನು ವಿತರಿಸಲಾಯಿತು.

ತೆಲಂಗಾಣ ರಾಜ್ಯದ ಸಾರಿಗೆ ಆಯುಕ್ತರಾದ ಡಾ. ಕೆ. ಇಲಂಬರಿತಿ (IAS) ಮತ್ತು ಇಲೆಟ್ಸ್ (Elets) ಸಂಸ್ಥೆಯ ಸಿಇಒ ರವಿ ಗುಪ್ತಾ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಸಂಸ್ಥೆಯ ಪರವಾಗಿ ಮುಖ್ಯ ಉಗ್ರಾಣ ಮತ್ತು ಖರೀದಿ ನಿಯಂತ್ರಕರಾದ ಮಂಜುನಾಥ ಕೆ.ವಿ. ಹಾಗೂ ಕಾರ್ಯ ವ್ಯವಸ್ಥಾಪಕರಾದ ಎಂ. ಜಗದೀಶ್ ಅವರು ಪ್ರಶಸ್ತಿಗಳನ್ನು ಸ್ವೀಕರಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್