Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಖನಗಾಂವನಲ್ಲಿ ಮಿಂಚಿದ ಬಾಡಿ ಬಿಲ್ಡರ್‌ಗಳು; ಖಾನ್‌ಗಾಂ ಶ್ರೀ-2026' ಮುಕುಟ ಧರಿಸಿದ ಸುನಿಲ್ ಭಾತಕಾಂಡೆ

Advertisement
​ಬೆಳಗಾವಿ: ಇಲ್ಲಿನ ಗ್ರಾಮೀಣ ತಾಲ್ಲೂಕಿನ ಖನಗಾಂವ ಗ್ರಾಮದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ '1ನೇ ಖಾನ್‌ಗಾಂ ಶ್ರೀ-2026' ಮತ್ತು 'ಬಸವಣ್ಣ ಶ್ರೀ TOP-10' ಗ್ರಾಮೀಣ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯು ಅತ್ಯಂತ ವೈಭವದಿಂದ ಜರುಗಿತು. ಬೆಳಗಾವಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ (BDBBA) ಸಹಯೋಗದೊಂದಿಗೆ ಯುವ ಮುಖಂಡ ಯೋಗೇಶ್ ಭಾಧಗಾವಿ ಅವರು ಈ ಸ್ಪರ್ಧೆಯನ್ನು ಆಯೋಜಿಸಿದ್ದರು.
ವಿಜೇತರ ವಿವರ: ವಿವಿಧ ತೂಕದ ವಿಭಾಗಗಳಲ್ಲಿ ನಡೆದ ಈ ರೋಚಕ ಸ್ಪರ್ಧೆಯಲ್ಲಿ ಹೊಂಗಾ ಗ್ರಾಮದ ಸುನಿಲ್ ಭಾತಕಾಂಡೆ ಅವರು ಸಮಗ್ರ ಪ್ರಶಸ್ತಿ ಗೆಲ್ಲುವ ಮೂಲಕ 'ಖಾನ್‌ಗಾಂ ಶ್ರೀ-2026' ಟೈಟಲ್ ತನ್ನದಾಗಿಸಿಕೊಂಡರು. 60 ಕೆಜಿ ವಿಭಾಗದಲ್ಲಿ ತುಷಾರ್ ಗಾವಡೆ, 65 ಕೆಜಿಯಲ್ಲಿ ಶ್ರೀಶಿವ ಮೊಡಗೇಕರ್, 70 ಕೆಜಿಯಲ್ಲಿ ಯೋಗೇಶ್ ಭಾಧಗಾವಿ ಹಾಗೂ 70 ಕೆಜಿ ಮೇಲ್ಪಟ್ಟ ವಿಭಾಗದಲ್ಲಿ ಸುನಿಲ್ ಭಾತಕಾಂಡೆ ಪ್ರಥಮ ಸ್ಥಾನ ಪಡೆದರು.
ಗಣ್ಯರ ಉಪಸ್ಥಿತಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬೆಳಗಾವಿ ಗ್ರಾಮೀಣ ಮಂಡಲ ಬಿಜೆಪಿ ಅಧ್ಯಕ್ಷ ಯುವರಾಜ್ ಜಾಧವ್ ಆಗಮಿಸಿ ವಿಜೇತರಿಗೆ ಬಹುಮಾನ ವಿತರಿಸಿದರು. ಕರ್ನಾಟಕ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ಡಾ. ಸೋನಾಲಿ ಸರನೋಬತ್ ಮಾತನಾಡಿ, ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಇಂತಹ ವೇದಿಕೆಗಳು ಅಗತ್ಯ ಎಂದರು. ವೇದಿಕೆಯ ಮೇಲೆ ಸಮಾಜ ಸೇವಕರಾದ ಕಲ್ಲಪ್ಪ ಚೌಗುಲೆ, ನಿಲೇಶ್ ಹಿಂದಿನಕೇರಿ, ಮಲ್ಲೇಶಿ ಕೊನಸಿನಕೊಪ್ಪ, ಸಚಿನ್ ಕಣಬರ್ಗಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
​ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ಪದಾಧಿಕಾರಿಗಳಾದ ಅವಿನಾಶ್ ಪೋತ್ದಾರ್, ಗಂಗಾಧರ್ ಎಂ., ಮತ್ತು ಹೇಮಂತ್ ಹಾವಳ್ ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ಕಾರ್ಯಕ್ರಮದಲ್ಲಿ ನೂರಾರು ಕ್ರೀಡಾ ಪ್ರೇಮಿಗಳು ಪಾಲ್ಗೊಂಡು ಕ್ರೀಡಾಪಟುಗಳನ್ನು ಹುರಿದುಂಬಿಸಿದರು.



ವರದಿ: ಮಹಾಂತೇಶ್ ಎಸ್ ಹುಲಿಕಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ