Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೈಲಹೊಂಗಲ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ ಪ್ರಕರಣ : ಮತ್ತೆ ನಾಲ್ವರು ಸಾವು

Advertisement
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಸಮೀಪ ಇರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಿಸದೆ ಇಂದು ಒಂದೇ ದಿನ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.ಈ ಮೂಲಕ ಈ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಮೃತರನ್ನು ಅಕ್ಷಯ ತೋಪಡೆ, ದೀಪಕ್ ಮುನವಳ್ಳಿ, ಸುದರ್ಶನ ಬನೋಶಿ, ಬೈಲಹೊಂಗಲ ತಾಲೂಕಿನ ಅರವಳ್ಳಿ ನಿವಾಸಿ ಮಂಜುನಾಥ ಮಡಿವಾಳಪ್ಪ ಕಾಜಗಾರ್, ಗೋಕಾಕ್ ತಾಲೂಕಿನ ಗೊಡಚಿನಮಲ್ಕಿ ಗ್ರಾಮದ ಭರತೇಶ ಸಾರವಾಡಿ, ಅಥಣಿ ಪಟ್ಟಣದ ತೇರದಾಳ ನಿವಾಸಿ ಮಂಜುನಾಥ ತೇರದಾಳ ಹಾಗೂ ಬಾಗಲಕೋಟೆ ಜಿಲ್ಲೆಯ ಮರೆಗುದ್ದಿ ಗ್ರಾಮದ ಗುರುಪಾದಪ್ಪ ತಮ್ಮನ್ನವರ್ ಎಂದು ಗುರುತಿಸಲಾಗಿದೆ.

ವಿಕ್ರಮ ಇನಾಮದಾರ್ ಅವರಿಗೆ ಸೇರಿದ ಕಾರ್ಖಾನೆಯಲ್ಲಿ ಬುಧವಾರ ವಾಲ್ ದುರಸ್ತಿ ಕಾರ್ಯ ನಡೆಯುತ್ತಿದ್ದ ವೇಳೆ ಬಾಯ್ಲರ್ ಸ್ಫೋಟಗೊಂಡಿದ್ದು, ಕುದಿಯುತ್ತಿದ್ದ ಕಬ್ಬಿನ ಹಾಲು ಕಾರ್ಮಿಕರ ಮೈಮೇಲೆ ಬಿದ್ದ ಪರಿಣಾಮ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.

ಘಟನೆಯಲ್ಲಿ ಸ್ಥಳದಲ್ಲೇ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ನಾಲ್ವರು ಕಾರ್ಮಿಕರು ಕೊನೆಯುಸಿರೆಳೆದಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಮೃತ ಕಾರ್ಮಿಕರ ಕುಟುಂಬಸ್ಥರು ರಾಜ್ಯ ಸರ್ಕಾರ ಹಾಗೂ ಕಾರ್ಖಾನೆ ಆಡಳಿತ ಮಂಡಳಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಖಾನೆಯಿಂದ ಯಾವುದೇ ಸ್ಪಂದನೆ ಇಲ್ಲ, ಸರ್ಕಾರದಿಂದಲೂ ಪರಿಹಾರ ಘೋಷಣೆ ಆಗಿಲ್ಲ ಎಂದು ಆರೋಪಿಸಿ, ನ್ಯಾಯ ಹಾಗೂ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ