ಅಥಣಿ : ತಾಲ್ಲೂಕಿನ ಅಡಹಳ್ಳಿ ಗ್ರಾಮ ಪಂಚಾಯತಿಯಲ್ಲಿ 15ನೇ ಹಣಕಾಸು ಯೋಜನೆಯಡಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ತಪ್ಪಿತಸ್ಥ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಗ್ರಾಮ ಪಂಚಾಯತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿರಿಸಿದ ಅನುದಾನವನ್ನು ಯಾವುದೇ ಕಾಮಗಾರಿ ಕೈಗೊಳ್ಳದೇ ನಕಲಿ ಬಿಲ್ಲುಗಳ ಮೂಲಕ ದೂರುಪಯೋಗ ಮಾಡಲಾಗಿ ಎಂದು ದೂರಿದ್ದಾರೆ.
ಅಡಹಳ್ಳಿ ಗ್ರಾಮ ಪಂಚಾಯತಿಯಲ್ಲಿ 15ನೇ ಹಣಕಾಸು ಯೋಜನೆ, ಉದ್ಯೋಗ ಖಾತ್ರಿ ಯೋಜನೆ, ಶೇ.25 ರಷ್ಟು ಅನುದಾನ ಹಾಗೂ ಸಣ್ಣಪುಟ್ಟ ಖರೀದಿಗಳ ದಾಖಲೆಗಳಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವದು ಮತ್ತು ಒಂದೇ ಫೋಟೋ 3 ಸಾರಿ ಅಪ್ಲೋಡ್ ಮಾಡಿ ಭ್ರಷ್ಟಾಚಾರ ಮಾಡಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ ಎಂದು ಆರೋಪಿಸಲಾಗಿದೆ.
ಹೀಗಾಗಿ, ಅಡಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಸಂಬಂಧಪಟ್ಟ ಪಂಚಾಯತ್ ಅಧಿಕಾರಿಗಳನ್ನು ತಕ್ಷಣ ಅಮಾನತು ಮಾಡಿ ಸಮಗ್ರ ತನಿಖೆ ನಡೆಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ವರದಿ : ಅಜಯ ಕಾಂಬಳೆ


