Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾನಸಿಕ, ದೈಹಿಕ ಯೋಗಕ್ಷೇಮಕ್ಕೆ ಮೆದುಳಿನ ಆರೋಗ್ಯ ಬಹಳ ಮುಖ್ಯ : ಡಾ.ಪ್ರಿಯಾ

Advertisement
ತುರುವೇಕೆರೆ : ಮನುಷ್ಯದ ದೇಹವು ಸಕ್ರಿಯವಾಗಿ ಕ್ರಮಬದ್ಧವಾಗಿ ಕಾರ್ಯನಿರ್ವಹಿಸಲು ಮೆದುಳಿನ ಆರೋಗ್ಯ ಬಹಳ ಮುಖ್ಯವಾಗಿದೆ. ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಒಳಗೊಂಡಿರುವ ಮೆದುಳು ದೇಹದ ಆಜ್ಞೆ ಮತ್ತು ನಿಯಂತ್ರಣ ಕೇಂದ್ರವಾಗಿದೆ ಎಂದು ಮೆದುಳು ತಜ್ಞೆ ಡಾ.ಪ್ರಿಯ ತಿಳಿಸಿದರು.

ರೋಟರಿ ಕ್ಲಬ್ ತುರುವೇಕೆರೆ, ರೋಟರಿ ಬೆಂಗಳೂರು ನಾರ್ತ್ವೆಸ್ಟ್, ಇ-ಕ್ಲಬ್ ಆಫ್ ಸಖಿ, ಓಯಸಿಸ್, ಕೊಲೋನವಾಲಾ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನ ತುಲೀಪ್ ಹೋಟೆಲ್ ನಲ್ಲಿ ನಡೆದ ಆರೋಗ್ಯಕರ ಮೆದುಳು, ಆರೋಗ್ಯವಂತ ಜೀವನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೆದುಳಿನ ಆರೋಗ್ಯ ಸುಧಾರಿಸಲು ಮತ್ತು ನಿರ್ವಹಿಸಲು ನಿಯಮಿತ ವ್ಯಾಯಾಮ, ಉತ್ತಮ ನಿದ್ರೆ, ನಿರ್ಜಲೀಕರಣವನ್ನು ತಪ್ಪಿಸುವುದು ಮತ್ತು ತಲೆಗೆ ಯಾವುದೇ ಪೆಟ್ಟಾಗದಂತೆ ಎಚ್ಚರ ವಹಿಸುವುದು ಬಹಳ ಮುಖ್ಯ ಎಂದರು.

ಮಾನಸಿಕ, ಬೌದ್ದಿಕ ಹಾಗೂ ದೈಹಿಕ ಚಟುವಟಿಕೆಯಲ್ಲಿ ಮೆದುಳಿನ ಕಾರ್ಯ ಬಹಳ ಪ್ರಮುಖವಾದುದಾಗಿರುವುದರಿಂದ ಮೆದುಳಿಗೆ ಒತ್ತಡವಾಗದಂತೆ ನೋಡಿಕೊಳ್ಳಬೇಕಿದೆ. ಮೆದುಳು ವಿಷಯ ಸಂಗ್ರಹಣೆ, ಸಂವಹನ ಶಕ್ತಿಯನ್ನು, ಅರಿವಿನ ಕೌಶಲ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ತಲೆಗೆ ಪೆಟ್ಟಾಗಿ ಮೆದುಳಿಗೆ ಹಾನಿಯಾದರೆ ನೆನಪಿನ ಶಕ್ತಿ ಕುಂದುತ್ತದೆ, ಮರೆವಿನ ಕಾಯಿಲೆ ಉಂಟಾಗುತ್ತದೆ ಎಂದ ಅವರು, ಅತಿಯಾದ ಮಧ್ಯಪಾನ, ಧೂಮಪಾನ ಸಹ ಮೆದುಳಿನ ಸಂವಹನ ಮಾರ್ಗಗಳನ್ನು ಅಡ್ಡಿಪಡಿಸಿ, ನರಮಂಡಲ ವ್ಯವಸ್ಥೆಯನ್ನು ಹಾನಿಗೊಳಿಸುತ್ತದೆ. ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ, ಉತ್ತಮ ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡುವುದರಿಂದ ಮೆದುಳಿನ ಆರೋಗ್ಯ ಉತ್ತಮವಾಗಿರುವಂತೆ ಕಾಪಾಡಿಕೊಳ್ಳಬಹುದಾಗಿದೆ. ಆದರೆ ನಿಷ್ಕ್ರಿಯ ಜೀವನಶೈಲಿ ಮೆದುಳನ್ನು ಕ್ರಿಯಾತ್ಮಕ ಚಟುವಟಿಕೆಯಿಂದ ದೂರಮಾಡಿ ಆತಂಕ, ಖಿನ್ನತೆಯಂತಹ ಸಮಸ್ಯೆಯನ್ನು ಉಂಟು ಮಾಡಿ ನಕಾರಾತ್ಮಕ ಯೋಚನೆಗಳಿಗೆ ದಾರಿ ಮಾಡಿಕೊಡುತ್ತದೆ ಎಂದರು.

ಈ ಸಂದರ್ಭದಲ್ಲಿ ರೋಟರಿ ತುರುವೇಕೆರೆ ಅಧ್ಯಕ್ಷ ವಿ.ಆರ್.ಉಮೇಶ್, ರೋಟರಿ ನಾರ್ತ್ವೆಸ್ಟ್ ಅಧ್ಯಕ್ಷೆ ಲಕ್ಷ್ಮೀ ಅಚ್ಯುತ, ಕಾರ್ಯದರ್ಶಿ ಸಚಿನ್ ಕಾಂಬ್ಳೆ, ನಿರ್ದೇಶಕರಾದ ರಮ್ಯಾಕಾಂಬ್ಳೆ, ಪ್ರತಾಪ್ ಉಜ್ಜಿನಿ, ಮುಧುರ ಉಜ್ಜಿನಿ, ಹೇಮಾ ಸೇರಿದಂತೆ ವಿವಿಧ ರೋಟರಿ ಕ್ಲಬ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ