ಧಾರವಾಡ: ಮರಳು ಸಾಗಣೆ ಲಾರಿ ಬಿಡಲು ಚಾಲಕನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮೂವರು ಹೆಡ್ ಕಾನ್ಸ್ ಟೇಬಲ್ ಹಾಅಗೂ ಓರ್ವ ಹೋಂ ಗಾರ್ಡ್ ಸೇರಿ ನಾಲ್ವರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಫೋನ್ ಪೇ ಮೂಲಕ 30,000 ರೂ. ಲಂಚ ಪಡೆದ ಆರೋಪದಡಿಯಲ್ಲಿ ಮೂವರು ಪೊಲೀಸ್ ಹೆಡ್ ಕಾನ್ಸ್ಟೇಬಲ್ಗಳು ಹಾಗೂ ಓರ್ವ ಗೃಹರಕ್ಷಕ ಸಿಬ್ಬಂದಿಯನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಕೊಪ್ಪಳ ಮೂಲದ ಲಾರಿ ಚಾಲಕ ಹನುಮಂತ ಎಂಬುವವರು ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಮರಳು ಲಾರಿ ಬಿಡಲು ತಮ್ಮಿಂದ ಲಂಚ ಪಡೆಯಲಾಗಿದೆ ಎಂದು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಆರೋಪಿಗಳು ಯಾವುದೇ ಭಯವಿಲ್ಲದೆ ಡಿಜಿಟಲ್ ರೂಪದಲ್ಲಿ 30,000 ರೂ. ಲಂಚದ ಹಣವನ್ನು ಪಡೆದುಕೊಂಡಿದ್ದರು.
ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಆನ್ಲೈನ್ ಡಿಜಿಟಲ್ ದಾಖಲೆಗಳು ಹಾಗೂ ನಾಲ್ವರ ಮೊಬೈಲ್ಗಳನ್ನು ಪರಿಶೀಲಿಸಿದ್ದರು. ಪ್ರಕರಣದಲ್ಲಿ ಧಾರವಾಡ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಹಸನ್ಸಾಬ ನದಾಫ್, ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಇಮಾಮ್ ಅತ್ತಾರ್, ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಗಿರೀಶ ಮನ್ಸೂರು, ಹೋಮ್ಗಾರ್ಡ್ ಸಿಬ್ಬಂದಿ ಇಕ್ಬಾಲ್ ನದಾಫ್ ನನ್ನು ಬಂಧಿಸಿದ್ದಾರೆ. ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.


