Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂಬೈನಲ್ಲಿ ಭಾರಿ ಮಳೆಗೆ ಕುಸಿದ ಕಟ್ಟಡ : 6 ಜನ ಸಾವು 

Advertisement

ಮುಂಬೈ: ದೇಶದ ವಿವಿಧ ರಾಜ್ಯಗಳಲ್ಲಿ ಮುಂಗಾರು ಮಳೆ ಚುರುಕು ಪಡೆದಿದ್ದು, ಮುಂಬೈನಲ್ಲಿ ಭಾನುವಾರ ಒಂದೇ ದಿನ ಮಳೆ ಅನಾಹುತಕ್ಕೆ 7 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಮುಂಬೈನ ಮನ್‌ಖರ್ದ್‌ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ಮನೆ ಕುಸಿದು 6 ಜನರು ಸಾವನ್ನಪ್ಪಿ, ಒಬ್ಬರು ಗಾಯಗೊಂಡಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಮನೆಯ ಮೇಲೆ ಮರಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಭಾನುವಾರ ನಗರದಲ್ಲಿ ಭಾರೀ ಮಳೆ ಸುರಿದ ಪರಿಣಾಮ ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಸಾಮಾನ್ಯ ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ನಗರದ ವಿವಿಧ ಪ್ರದೇಶಗಳಲ್ಲಿ ಬೆಳಗ್ಗೆ 8ರಿಂದ ಸಂಜೆ 10 ಗಂಟೆ ಅವಧಿಯಲ್ಲಿ 5ರಿಂದ 7 ಸೆ.ಮೀ. ಮಳೆ ಸುರಿದಿದೆ.

ಕಟ್ಟಡದ ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಶಂಕೆ ಇದೆ. ಹೀಗಾಗಿ, ಅಗ್ನಿಶಾಮಕ ದಳ ಮತ್ತು ಮುಂಬೈ ಪೊಲೀಸರ ನೇತೃತ್ವದಲ್ಲಿ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆದರೆ, ಧಾರಾಕಾರ ಮಳೆ ರಕ್ಷಣಾ ಕಾರ್ಯಕ್ಕೆ ಅಡ್ಡಿಪಡಿಸುತ್ತಿದೆ.

ಮುಂಬೈನ ಹಲವು ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದರಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದ್ದು, ರಸ್ತೆಗಳ ಮೇಲೆ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
15 ನಿಮಿಷದಲ್ಲಿ ಆಂಬುಲೆನ್ಸ್ ಸ್ಥಳಕ್ಕೆ ಬರದಿದ್ದರೆ ಚಾಲಕರಿಗೆ 5000 ರೂ. ದಂಡ : ಯು. ಟಿ ಖಾದರ್ ಮುಂಬೈನಲ್ಲಿ ಭಾರಿ ಮಳೆಗೆ ಕುಸಿದ ಕಟ್ಟಡ : 6 ಜನ ಸಾವು ಪಶ್ಚಿಮಘಟ್ಟ ಭಾಗದಲ್ಲಿ ವ್ಯಾಪಕ ಮಳೆ : ಮುಳಗುವ ಹಂತಕ್ಕೆ ತಲುಪಿದ ಸಂಗಮೇಶ್ವರ ಮಂದಿರ  ಡಿ.ಕೆ.ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ ಕಾಶಪ್ಪನವರ ಬೆಂಬಲಿಗರ, ಅಭಿಮಾನಿಗಳ ಭಾವನೆ ವರಿಷ್ಠರಿಗೆ ತಿಳಿಸುತ್ತೇನೆ. : ಡಿ. ಕೆ  ಶಿವಕುಮಾರ್ ಮೊಬೈಲ್‌ ಟಾರ್ಚ್ ಬೆಳಕಿನಲ್ಲಿ ಬಸ್ ಓಡಿಸಿದ ಡ್ರೈವರ್ ಸಸ್ಪೆಂಡ್ ನಟ ಆಮೀರ್ ಖಾನ್ ಮತ್ತು ಗೌರಿ ಸ್ಪ್ರಾಟ್ ಅಧಿಕೃತವಾಗಿ ವಿವಾಹ : ಫೋಟೋ ವೈರಲ್ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ : ಪಿಎಸ್‌ಐ ಅರೆಸ್ಟ್ಸಚಿವ ಸತೀಶ್ ಜಾರಕಿಹೊಳಿ ಆಪ್ತ ಸದಾಶಿವ ದೇಶಿಂಗೆ ಬಿಜೆಪಿ ಸೇರ್ಪಡೆ ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆ : ತುಂಬಿ ಹರಿಯುತ್ತಿರುವ ಕೃಷ್ಣ, ದೂದಗಂಗಾ, ವೇದಗಂಗಾ ನದಿಗಳು