Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಡ ಭಾಂಬ್ ಸ್ಫೋಟ: ಎತ್ತುಗಳು ಸ್ಥಳದಲ್ಲೇ ಸಾವು

Advertisement
ಹಾನಗಲ್ : ಕಾಡು ಪ್ರಾಣಿಗಳನ್ನ ಬೇಟೆಯಾಡಲು ಇಟ್ಟಿದ್ದ ನಾಡ ಬಾಂಬ್ ಸ್ಫೋಟ ಪರಿಣಾಮ ಎತ್ತುಗಳು ಮೃತಪಟ್ಟಿರುವ ಘಟನೆ ಹಾನಗಲ್ ತಾಲೂಕಿನ ಹೀರೂರು ಗ್ರಾಮದ ಹೊರವಲಯದ ಅರಣ್ಯಪ್ರದೇಶದಲ್ಲಿ ನಡೆದಿದೆ.

ಗ್ರಾಮದ ಹೊರವಲಯದ ಸಿಗಿಗುಂಡಿ ಪ್ರದೇಶದ ಕಾಡಿನಲ್ಲಿ ವನ್ಯಜೀವಿಗಳು ನೀರು ಕುಡಿಯಲೆಂದು ತೊಡಲಾಗಿದ್ದ ನೀರಿನ ಗುಂಡಿಯ ಬಳಿ ಯಾರೋ ಕಿಡಿಗೇಡಿಗಳು ನಾಡ ಬಾಂಬ್ ಇಟ್ಟಿದ್ದರು ಎನ್ನಲಾಗಿದೆ.

ನೀರು ಕುಡಿಯಲು ತೆರಳಿದ್ದ ಎರಡು ಹೋರಿಗಳು ನಾಡ ಬಾಂಬ್ ಅನ್ನು ಕಚ್ಚಿದ ಪರಿಣಾಮ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದಿಂದ ಹೋರಿಗಳ ಬಾಯಿ ಛಿದ್ರ-ಛಿದ್ರಗೊಂಡು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿವೆ.

ಮೃತ ಹೋರಿಗಳು ಹೀರೂರು ಗ್ರಾಮದ ರೈತ ಶೇಖಪ್ಪ ಮೇಳ್ಳಿಹಳ್ಳಿ ಅವರಿಗೆ ಸೇರಿದ್ದವು ಎಂದು ತಿಳಿದುಬಂದಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಹೋರಿಗಳನ್ನು ಕಳೆದುಕೊಂಡ ರೈತ ಶೇಖಪ್ಪ ಅವರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ಪರಿಶೀಲನೆ:

ಇನ್ನು ಘಟನೆಯ ಮಾಹಿತಿ ತಿಳಿದ ತಕ್ಷಣ ಹಾನಗಲ್ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಡಿನ ನೀರಿನ ಗುಂಡಿಯ ಸುತ್ತಮುತ್ತ ಇನ್ನೂ ನಾಡ ಬಾಂಬ್‌ಗಳು ಇರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಅಧಿಕಾರಿಗಳು ಸುದೀರ್ಘ ಪರಿಶೀಲನೆ ಕೈಗೊಂಡಿದ್ದಾರೆ.

ಸದ್ಯ ಈ ಸಂಬAಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ನಾಡ ಬಾಂಬ್ ಇಟ್ಟವರ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಫೋಟೋ : ನಾಡ ಬಾಂಬ್ ಸ್ಪೋಟ- ಎರಡು ಹೋರಿಗಳು ಸಾವು..!

ವರದಿ : ರಮೇಶ್ ತಾಳಿಕೋಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್