Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸ್ ಚಾಲಕನ ಆಚಾತುರ್ಯ ? ಅಪಘಾತ ! ಯುವಕನ ಧಾರುಣ ಸಾವು ಇನ್ನೋರ್ವನಸ್ಥಿತಿ ಚಿಂತಾಜನಕ

Advertisement
ಕಾರಟಗಿ ; ತಾಲೂಕಿನ ಮರ್ಲಾನಹಳ್ಳಿಯ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ ಮರ್ಲಾನಹಳ್ಳಿಯ ಪೆಟ್ರೋಲ್ ಬಂಕ್ ಹತ್ತಿರದ ಹೆದ್ದಾರಿಯ ಮುಂಭಾಗದಲ್ಲಿ ಕೆಎಸ್ಆರ್ಟಿಸಿ ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಿದ್ದಾಪುರದ ಮಂಜುನಾಥ್ ಸ್ಥಳದಲ್ಲಿ ಮೃತಪಟ್ಟಿದ್ದಾನೆ ಅಪಘಾತ ಘಟನೆ ವಿಚಾರ ತಿಳಿಯುತ್ತಿದ್ದಂತೆ ಕಾರಟಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬಂದರು ಇನ್ನೋರ್ವ ಬೈಕ್ ಸವಾರನ ಖಾಸಿಂಸಾಬ್ ಕಾರಟಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕಳುಹಿಸಲಾಯಿತು ಆದರೆ ಕಾರಟಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ಗಾಯಾಳು ಸ್ಪಂದಿಸದೆ ಇರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಗಂಗಾವತಿಗೆ ಕಳುಹಿಸಲಾಯಿತು.ಆದರೆ ಗಂಗಾವತಿಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಇರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಗೆ ಕಳುಹಿಸಲಾಗಿದೆ, ಈ ಕುರಿತು ಕಾರಟಗಿ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದ್ದು ಅಧಿಕಾರಿಗಳು ಮೃತಪಟ್ಟ ವ್ಯಕ್ತಿಯ ಪೋಸ್ಟ್ ಮಾರ್ಟಮ್ ಮಾಡಿ ಮೃತ ದೇಹವನ್ನು ಕುಟುಂಬಗಳಿಗೆ ಒಪ್ಪಿಸಿದ್ದಾರೆ



ಅಪಘಾತ ಹೇಗೆ ನಡೆಯಿತು ?
ಕಾರಟಗಿ ಮಾರ್ಗವಾಗಿ ಗಂಗಾವತಿಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ (ಕೆಎ ೩೬.ಎಫ್ ೧೪೪೯) ಶನಿವಾರ ಮಧ್ಯಾಹ್ನ ೧೨: ೪೫ ಘಂಟೆ ಸುಮಾರಿಗೆ ಕಾರಟಗಿ ಸರಹದ್ದು ವ್ಯಾಪ್ತಿಗೊಳಪಡುವ ಮರ್ಲಾನಹಳ್ಳಿಯ ಪೆಟ್ರೋಲ್ ಬಂಕ್ ಪಶ್ಚಿಮ ದಿಕ್ಕಿಗೆ ಇರುವ ರಾಜ್ಯ ರಸ್ತೆಯ ಮೇಲೆ ಬಸ್ಸು ಚಲಿಸುತ್ತಿರುವ ಸಂದರ್ಭದಲ್ಲಿ ಮುಂದೆ ಹೋಗುತ್ತಿರುವ ಕಾರನ್ನು ಓವರ್ ಟೇಕ್ ಮಾಡಲು ಬಸ್ ಚಾಲಕ ಪ್ರಯತ್ನಿಸಿದ್ದಾನೆ ಓವರ್ಟೇಕ್ ಮಾಡಿದ ಸಂದರ್ಭದಲ್ಲಿ ಮರ್ಲಾ ನಹಳ್ಳಿಯಿಂದ ಕಾರಟಗಿಗೆ ಕೆಲಸದ ನಿಮಿತ್ಯ ಬರುತ್ತಿರುವ ದ್ವಿಚಕ್ರವಾಹನಕ್ಕೆ (ಗಾಡಿ ನಂಬರ್ ಕೆಎ ೩೭, ಇಪಿ ೪೪೯೪ ) ಬಸ್ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯ ದಾರಿಹೋಕರು ಘಟನೆಯ ಬಗ್ಗೆ ಮಾತನಾಡಿಕೊಂಡರು ಬಸ್ ಚಾಲಕನ ಅಚಾತುರ್ಯದಿಂದ ಅಪಘಾತ ಸಂಭವಿಸಲಾಗಿದೆ ಎಂದು ಹೇಳಲಾಗುತ್ತಿದೆ
ಇತ್ತೀಚಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಚಾಲಕರು ನಗರದಲ್ಲಿ ಮತ್ತು ನಗರದ ಹೊರ ವಲಯದ ರಸ್ತೆಗಳ ಮೇಲೆಯೂ ಬಸ್ ಓವರ್ ಸ್ಪೀಡ್ ಮಾಡುವುದರ ಮೂಲಕ ಕರ್ತವ್ಯದಲ್ಲಿ ಅಚಾತುರ್ಯ ತೋರುತ್ತಿದ್ದಾರೆ ಬಸ್ ಚಾಲಕರ ಅಚಾತುರ್ಯದಿಂದಾಗಿ ಅಪಘಾತಗಳು ಪ್ರಕರಣಗಳು ಹೆಚ್ಚುತ್ತಿದ್ದು ಮರ್ಲಾನಹಳ್ಳಿಯ ಅಪಘಾತಕ್ಕೆ ಬಸ್ ಚಾಲಕನ ಅಚಾತುರ್ಯ ಕಾರಣ ರಾಜ್ಯ ರಸ್ತೆ ಸಾರಿಗೆ ಇಲಾಖೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಹಾಗೂ ಗಾಯಾಳುಗೆ ತಲಾ 20 ಲಕ್ಷ ರೂಪಾಯಿ ಪರಿಹಾರ ನೀಡಬೇಕು

ಶರಣಪ್ಪ ಸಂಗಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ