LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು 

Advertisement

ಬೆಂಗಳೂರು : ಶೀಘ್ರದಲ್ಲಿಯೇ ಸಾರಿಗೆ ಬಸ್ ಗಳ ಟಿಕೆಟ್ ದರ ಹೆಚ್ಚಳವಾಗಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಬೈರತಿ ಸುರೇಶ್, ಕೇಂದ್ರ ಸರ್ಕಾರ ತೈಲೋತ್ಪನ್ನಗಳ ದರವನ್ನು ಏರಿಕೆ ಮಾಡಿದೆ. ಇದರಿಂದಾಗಿ ಬಸ್ ಟಿಕೆಟ್ ದರ ಏರಿಸುವ ಅನಿವಾರ್ಯವಿದೆ.ಅಲ್ಪ ಪ್ರಮಾಣದಲ್ಲಿ ದರ ಏರಿಕೆಯಾಗಲಿದೆ ಎಂದು ತಿಳಿಸಿದರು.

ಕಳೆದ ಎಂಟು ತಿಂಗಳಲ್ಲಿ ಕೇಂದ್ರ ಸರ್ಕಾರ ತೈಲೋತ್ಪನ್ನ ದರಗಳನ್ನು ಹೆಚ್ಚಳ ಮಾಡಿದೆ. ಹೀಗಿದ್ದಾಗ್ಯೂ ನಾವು ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡಿಲ್ಲ. ಇದರಿಂದ ನಮ್ಮ ನಾಲ್ಕೂ ಸಾರಿಗೆ ನಿಗಮಗಳಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗುತ್ತಿದೆ.

ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಸಮಿತಿ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಅಧ್ಯಯನ ನಡೆಸುತ್ತಿದ್ದು, ಸದ್ಯದಲ್ಲೇ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಹೆಚ್ಚು ಹೊರೆಯಾಗದ ರೀತಿಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ದರ ಪರಿಷ್ಕರಣೆ ಮಾಡಲಾಗುತ್ತದೆ. ಇದರಿಂದ ಆಗುವ ಹೊರೆಯನ್ನು ಸರಿದೂಗಿಸಲು ಸರ್ಕಾರದಿಂದ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ. ಈ ಮೂಲಕ ಹೊರೆಯನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೌತ್ ಅಪ್ರಿಕಾ ತಂಡಕ್ಕೆ 11 ರನ್ ಗಳ ವಿಜಯಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಡಿ. ಕೆ ಶಿವಕುಮಾರ್ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ : 8 ವಿದ್ಯಾರ್ಥಿಗಳು ದಾರುಣ ಸಾವು ಇಂದಿನಿಂದ ಪ್ರಜಾಸೇವೆ ಅಭಿಯಾನ ಆರಂಭ : ಚಿಟಿಕೆಯಲ್ಲಿ ದೂರು ಸಲ್ಲಿಸಲು ಅವಕಾಶ ಕೂಲಿ ಕಾರ್ಮಿಕರ ಕೆಲಸ ಮಾಡುತ್ತಿದ್ದ ವೇಳೆ 14 ಚಿನ್ನದ ನಾಣ್ಯಗಳು ಪತ್ತೆಮಹಿಳಾ ಏಸಿಯಾ ಕಪ್: ನಾಳೆ ಭಾರತ-ಪಾಕ್ ಪಂದ್ಯ ಸೆ. 9 ರಂದು ಪಾಕಿಸ್ತಾನ- ಇಂಗ್ಲೆಂಡ್ ತೃತೀಯ ಟೆಸ್ಟ್ ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ 2ನೇ ಪಟ್ಟಿ ಘೋಷಣೆ: ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇವರ ದರ್ಶನ ಪಡೆದ ನಾಗರಾಜ್ ಯಾದವ್ ದಂಪತಿ