LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರೀಲ್ಸ್ ನೋಡುವುದರಲ್ಲಿ ಬ್ಯುಸಿ : ಸುತ್ತಿಗೆಯಿಂದ ಹೊಡೆದು ಹೆಂಡತಿ ಕೊಲೆ

Advertisement

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಧೀಡೀರ್ ಹತ್ಯೆ ಮಾಡಿ, ಶವವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಪರಾರಿಯಾಗಿದ್ದ ಘಟನೆ ನಗರದ ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದ ಆರೋಪಿ ಪತಿಯನ್ನು ಪೊಲೀಸರು ಬಿಹಾರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಿಹಾರ ಮೂಲದ ಧೀರಜ್ ಕುಮಾರ್ (24) ಬಂಧಿತ ಆರೋಪಿಯಾಗಿದ್ದು, ಜುಲೈ 27 ರಂದು ಗೇರುಪಾಳ್ಯದ ಬಾಡಿಗೆ ಮನೆಯಲ್ಲಿ ಈ ದೋರಜನಕ ಕೃತ್ಯ ಎಸಗಿದ್ದ.

ವಿಷಯ ಬೆಳಕಿಗೆ ಬಂದಿದ್ದು ಹೇಗೆ? ಜುಲೈ 29 ರಂದು ಮೃತ ರೀಯಾ ಕುಮಾರ್ (20) ಅವರ ಸ್ನೇಹಿತೆ ಹಲವು ಬಾರಿ ಫೋನ್ ಮಾಡಿದರೂ ಯಾವುದೇ ಉತ್ತರ ಬರಲಿಲ್ಲ. ಇದರಿಂದ ಅನುಮಾನಗೊಂಡ ಅವರು ಮನೆ ಬಳಿ ಹೋಗಿ ಪರಿಶೀಲಿಸಿದಾಗ ಕಿಟಕಿ ಬಳಿ ತೀವ್ರ ದುರ್ವಾಸನೆ ಬರುತ್ತಿರುವುದು ತಿಳಿದುಬಂದಿದೆ.

 ತಕ್ಷಣವೇ ಮನೆ ಮಾಲೀಕ ಲಕ್ಷ್ಮಣ್ ಅವರಿಗೆ ಮಾಹಿತಿ ನೀಡಲಾಗಿದ್ದು, ಬಾಗಿಲು ತೆರೆದು ನೋಡಿದಾಗ ಬೆಡ್‌ಶೀಟ್‌ನಲ್ಲಿ ಸುತ್ತಲ್ಪಟ್ಟ ಸ್ಥಿತಿಯಲ್ಲಿ ಕೊಳೆತು ಹೋಗಿದ್ದ ರೀಯಾ ಅವರ ಶವ ಪತ್ತೆಯಾಗಿದೆ. ಬಳಿಕ ಸ್ಥಳೀಯರು ಕುಂಬಳಗೂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪ್ರೀತಿಸಿ ಮದುವೆಯಾಗಿದ್ದ ಜೋಡಿ: ಬಿಹಾರ ಮೂಲದ ಧೀರಜ್ ಮತ್ತು ರೀಯಾ ಪ್ರೀತಿಸುತ್ತಿದ್ದು, ಸುಮಾರು 10 ತಿಂಗಳ ಹಿಂದೆ ಪೋಷಕರಿಗೆ ತಿಳಿಸದೆ ಬೆಂಗಳೂರಿಗೆ ಬಂದು ಮದುವೆಯಾಗಿದ್ದರು. 

ಕಳೆದ ಡಿಸೆಂಬರ್‌ನಲ್ಲಿ ಗೇರುಪಾಳ್ಯದ ಲಕ್ಷ್ಮಣ್ ಎಂಬುವರ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದ ಈ ದಂಪತಿಯಲ್ಲಿ ರೀಯಾ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರೆ, ಧೀರಜ್ ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡಿದ್ದನು. ಆರಂಭದಲ್ಲಿ ಚೆನ್ನಾಗಿಯೇ ಇದ್ದ ದಂಪತಿಯ ಮಧ್ಯೆ ಇತ್ತೀಚೆಗೆ ಕೌಟುಂಬಿಕ ವಿಚಾರವಾಗಿ ಪದೇ ಪದೇ ಜಗಳಗಳು ನಡೆಯುತ್ತಿದ್ದವು.

ಬುದ್ಧಿ ಹೇಳಿದ್ದರೂ ಕೇಳದ ಕೋಪ: ಪತಿ-ಪತ್ನಿಯ ನಡುವಿನ ಮನಸ್ತಾಪ ಹೆಚ್ಚಾದಾಗ ಸ್ನೇಹಿತರು ಹಾಗೂ ಹಿತೈಷಿಗಳು ಮಧ್ಯಪ್ರವೇಶಿಸಿ ದಂಪತಿಗೆ ಸಮಾಧಾನಪಡಿಸಿ ಬುದ್ಧಿವಾದ ಹೇಳಿದ್ದರು. 

ಆದಾಗ್ಯೂ ಇಬ್ಬರ ನಡುವಿನ ಹೊಂದಾಣಿಕೆ ಕೊರತೆ ಮುಂದುವರಿದಿತ್ತು. ಜುಲೈ 27 ರಂದು ನಡೆದ ತೀವ್ರ ಜಗಳದ ವೇಳೆ ಆಕ್ರೋಶಗೊಂಡ ಧೀರಜ್, ಪತ್ನಿ ರೀಯಾಳ ಕತ್ತು ಹಿಸುಕಿ ಭೀಕರವಾಗಿ ಕೊಲೆ ಮಾಡಿದ್ದಾನೆ. ಬಳಿಕ ಸಾಕ್ಷ್ಯ ಮುಚ್ಚಿಹಾಕುವ ಉದ್ದೇಶದಿಂದ ಶವವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಸ್ವಗ್ರಾಮ ಬಿಹಾರಕ್ಕೆ ಪರಾರಿಯಾಗಿದ್ದ.

ಕಾರ್ಯಾಚರಣೆ ನಡೆಸಿ ಬಂಧಿಸಿದ ಪೊಲೀಸರು: ಕೊಲೆ ಪ್ರಕರಣ ದಾಖಲಿಸಿಕೊಂಡ ಕುಂಬಳಗೂಡು ಠಾಣೆಯ ವಿಶೇಷ ಪೊಲೀಸ್ ತಂಡವು ತನಿಖೆ ತೀವ್ರಗೊಳಿಸಿ, ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿ ಬಿಹಾರದಲ್ಲಿರುವುದನ್ನು ಪತ್ತೆಹಚ್ಚಿದೆ. 

ಕೂಡಲೇ ಬಿಹಾರಕ್ಕೆ ತೆರಳಿದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಧೀರಜ್ ಕುಮಾರ್‌ನನ್ನು ಬಂಧಿಸಿ ಬೆಂಗಳೂರಿಗೆ ಕರೆತಂದಿದೆ.

ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೃಶಬ್ ಪಂತ್ ಇನ್ನೊಂದು ವಿಕ್ರಮ CPI ನೇತೃತ್ವದಲ್ಲಿ ಈದ್ ಮಿಲಾದ್ ಶಾಂತಿ ಸಭೆಕೊಲಂಬೊ ಟೆಸ್ಟ್ :ಬ್ರಹತ್ ಮೊತ್ತದತ್ ಭಾರತಬಸ್‌ಗಳಲ್ಲಿ ಉಚಿತ ಪ್ರಯಾಣ, ವರ್ಷಕ್ಕೆ 3 ಉಚಿತ ಸಿಲಿಂಡರ್‌: CM ವಿಜಯ್‌ 'ಸೂಪರ್‌ ಸಿಕ್ಸ್‌' ಘೋಷಣೆಸೆಲ್ಫಿ' ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟ ಯುವತಿ : ವಿಡಿಯೋ ವೈರಲ್ ನಿಡಗುಂದಿ ಕೇನಾಲ್‌ಗೆ ಜಾರಿ ಬಿದ್ದು ವ್ಯಕ್ತಿ ನಾಪತ್ತೆ: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್ವಿದ್ಯಾರ್ಥಿನಿಯರ ಜೊತೆ ಸ್ನಾನ ಮಾಡಿದ ಪ್ರಾಂಶುಪಾಲ ಅಮಾನತು : ವಿಡಿಯೋ ವೈರಲ್ಈಸ್ಟ್ ಬೆಂಗಾಲ್ ಗೆ ಡುರಾಂಡ್ ಕಪ್ ಕಿರೀಟ ಕರ್ನಾಟಕ ಯುವಸೇನೆ ಸಮಿತಿವತಿಯಿಂದ  ಪುನೀತ್ ರಾಜಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಮಹೇಶ್ ರೆಡ್ಡಿ