Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಯಾವಾಗ ಬೇಕಾದರೂ ಮದ್ಯಂತರ ಚುನಾವಣೆ : ಬಿ. ವೈ ವಿಜಯೇಂದ್ರ 

Advertisement

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಪ್ರಸಂಗಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಯನ್ನು ಕಟುವಾಗಿ ಟೀಕಿಸಿರುವ ಅವರು, ಇದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟದ "ಮೊದಲ ವಿಕೆಟ್ ಪತನ" ಎಂದು ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ. ವಿಜೇಂದ್ರ, ರಾಮಲಿಂಗಾರೆಡ್ಡಿ ಅವರು ಪಕ್ಷದ ಹಿರಿಯ ನಾಯಕರಾಗಿದ್ದು, ಅವರ ರಾಜೀನಾಮೆಯ ವೈಯಕ್ತಿಕ ನಿರ್ಧಾರದ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದರು. ಆದರೆ, ಈ ಬೆಳವಣಿಗೆಯು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಒಳಜಗಳ ಮತ್ತು ಅಸಮಾಧಾನವನ್ನು ಬಹಿರಂಗಪಡಿಸಿದೆ ಎಂದು ಅವರು ಪ್ರತಿಪಾದಿಸಿದರು.

ಅಧಿಕಾರಕ್ಕಾಗಿ ಕಿತ್ತಾಟ: ವಿಜೇಂದ್ರ ಆರೋಪ

ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿ ಅಥವಾ ಜನರ ಹಿತಾಸಕ್ತಿಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ವಿಜೇಂದ್ರ ಕಿಡಿಕಾರಿದರು. ಸಚಿವ ಸ್ಥಾನ, ಪ್ರಮುಖ ಖಾತೆಗಳು ಮತ್ತು ವೈಯಕ್ತಿಕ ಸ್ಥಾನಮಾನಗಳಿಗಾಗಿ ಕಾಂಗ್ರೆಸ್ಸಿಗರು ನಿರಂತರವಾಗಿ ಕಿತ್ತಾಟ ನಡೆಸುತ್ತಿದ್ದಾರೆ. ಈ ಆಂತರಿಕ ಅಸಮಾಧಾನ ಮತ್ತು ಅಧಿಕಾರದ ಹಪಾಹಪಿಯೇ ಸಚಿವರೊಬ್ಬರು ರಾಜೀನಾಮೆ ನೀಡಲು ಮುಖ್ಯ ಕಾರಣ ಎಂದು ಅವರು ವಿಶ್ಲೇಷಿಸಿದರು.

ಮಧ್ಯಂತರ ಚುನಾವಣೆಯ ಮುನ್ಸೂಚನೆ

ರಾಜ್ಯದಲ್ಲಿ ಸದ್ಯ ಸೃಷ್ಟಿಯಾಗಿರುವ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ, ಸರ್ಕಾರ ಹೆಚ್ಚು ದಿನ ಉಳಿಯುವ ಲಕ್ಷಣಗಳು ಕಾಣಿಸುತ್ತಿಲ್ಲ. ಕರ್ನಾಟಕದಲ್ಲಿ ಯಾವಾಗ ಬೇಕಾದರೂ ಮಧ್ಯಂತರ ಚುನಾವಣೆ ಎದುರಾಗಬಹುದು ಎಂದು ಭವಿಷ್ಯ ನುಡಿದ ಬಿ.ವೈ. ವಿಜೇಂದ್ರ, ಆಡಳಿತ ಪಕ್ಷದೊಳಗಿನ ಭಿನ್ನಮತವೇ ಈ ಸರ್ಕಾರಕ್ಕೆ ಮುಳ್ಳಾಗಲಿದೆ ಎಂಬ ಸುಳಿವು ನೀಡಿದರು.

 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳೆಯರಿಗೆ ಉಚಿತ ಸ್ವ-ಉದ್ಯೋಗ ತರಬೇತಿ ಶಿಬಿರಬೀಜ ಮತ್ತು ಗೊಬ್ಬರಗಳ ಕೊರತೆ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ: ಬಸವರಾಜ್ ಅಡವಿಮಠ್ ರಾಜ್ಯದಲ್ಲಿ ಯಾವಾಗ ಬೇಕಾದರೂ ಮದ್ಯಂತರ ಚುನಾವಣೆ : ಬಿ. ವೈ ವಿಜಯೇಂದ್ರ  ಶಾಸಕ ಜೆ ಎನ್ ಗಣೇಶ್ ಹುಟ್ಟುಹಬ್ಬ ಆಚರಣೆ​ಅನಾಥ ಮಹಿಳೆಗೆ ಆಸರೆಯಾದ ಬಡಕುಂದ್ರಿ ಪಿಡಿಓ: ಮಾನವೀಯತೆ ಮೆರೆದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗಡಿ.ಕೆ.ಶಿ ಸರ್ಕಾರದ ಮೊದಲ ವಿಕೆಟ್ ಪತನ : ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆಸೋಲು ಕಂಡಿದ ಮಹಿಳಾ ಮೀಸಲಾತಿ ಮತ್ತೊಮ್ಮೆ ಮಂಡಿಸಲು ಕೇಂದ್ರ ಸರ್ಕಾರ ನಿರ್ಧಾರಕಿವೀಸ್ ನೆಲದಲ್ಲಿ ಭಾರತ ಕ್ರಿಕೆಟ್ ತಂಡದ ದೊಡ್ಡ ಸರಣಿದೇಶದಲ್ಲೇ ಮೊದಲ ಬಾರಿಗೆ ಎರಡು ಹೊಸ ಸಚಿವಾಲಯ : ಡಿ. ಕೆ ಶಿವಕುಮಾರ್ ಘೋಷಣೆ ಶೇ. 50 ರಷ್ಟು ಸಂಚಾರಿ ನಿಯಮ ಉಲ್ಲಂಘನೆಗಳ ದಂಡ ಪಾವತಿಗೆ ಅವಕಾಶ