LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಇಂದು ಸಂಜೆಯೊಳಗೆ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ..?! 

Advertisement

ಬೆಂಗಳೂರು: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ಚರ್ಚೆ ರಾಜ್ಯ ರಾಜಕೀಯದಲ್ಲಿ ತೀವ್ರಗೊಂಡಿದೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ನಾಗೇಂದ್ರ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಡಿ.ಕೆ ಶಿವಕುಮಾರ್ ಜೊತೆ ಮಾತುಕತೆ ವೇಳೆ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ನಾಗೇಂದ್ರ ಮಾತುಕತೆ ನಡೆಸಿದ್ದು, "ನನ್ನನ್ನು ಅನಗತ್ಯವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ನನ್ನಿಂದ ಪಕ್ಷಕ್ಕೆ ಮುಜುಗರ ಆಗುವುದು ಬೇಡ. ಹೀಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ" ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ನಾಗೇಂದ್ರ ಅವರ ಮಾತನ್ನು ಆಲಿಸಿದ ಡಿ.ಕೆ. ಶಿವಕುಮಾರ್, "ಈ ಬಗ್ಗೆ ಹೈಕಮಾಂಡ್ ಜೊತೆ ಮಾತನಾಡಿ ತಿಳಿಸುತ್ತೇನೆ" ಎಂದು ಹೇಳಿದ್ದಾರೆ ಎನ್ನಲಾಗಿದೆ.

ವಿಪಕ್ಷಗಳ ನಿರಂತರ ಪ್ರತಿಭಟನೆ ಹಾಗೂ ರಾಜಕೀಯ ಒತ್ತಡದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಈ ನಿರ್ಧಾರಕ್ಕೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಸಂಜೆಯೊಳಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.ಆದರೆ, ರಾಜೀನಾಮೆ ಕುರಿತು ಅಂತಿಮ ನಿರ್ಧಾರ ಇನ್ನಷ್ಟೇ ಹೊರಬೀಳಬೇಕಿದೆ. ನಾಗೇಂದ್ರ ಅವರ ಮುಂದಿನ ನಡೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟ ನೆ ನಡೆಸಿತು. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯಪುರದಲ್ಲಿ ಐತಿಹಾಸಿಕ ಕೆರೆಯಲ್ಲಿ ತೇಲಿ ಬಂದ ಒಂದೇ ಕುಟುಂಬದ 6 ಶವಗಳು ಪತ್ತೆಧಾರವಾಡದಲ್ಲಿ ಸಿಲಿಂಡರ್ ಸ್ಪೋಟ : ಸ್ಫೋಟದ ತೀವ್ರತೆಗೆ ರಸ್ತೆಗೆ ಬಿದ್ದ ಪಾತ್ರೆ-ಪಗಡೆಗಳು ಇಂಗ್ಲೆಂಡ್- ಪಾಕಿಸ್ತಾನ ದ್ವಿತೀಯ ಟೆಸ್ಟ್ ನಾಳೆಶ್ರೀಲಂಕಾಗೆ ಫಾಲೋ ಆನ್ ಹೇರಿದ ಭಾರತ ತಂಡ ಮಹಿಳೆಯ ಫೋಟೋ ಸ್ಟೇಟಸ್ ಗೆ ಹಾಕಿದ ವ್ಯಕ್ತಿ: ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಪತಿ-ಪತ್ನಿ ಇಂದು ಸಂಜೆಯೊಳಗೆ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ..?! ಅಂಚೆ ಇಲಾಖೆಯಲ್ಲಿ ವಿವಿಧ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಭೀಕರ ಅಪಘಾತ : ಕಂಟೇನರ್‌ಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವು ವಿಶ್ವದಾದ್ಯಂತ ಬರೋಬ್ಬರಿ 12,000ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಟಾಕ್ಸಿಕ್ ಬಿಡುಗಡೆಅಸ್ಮಿತಾ ದೇ ಅವರಿಗೆ ಜೆಮೀನು ನೀಡಿದ ತ್ರಿಪುರಾ ಸರಕಾರ