ಬೆಂಗಳೂರು: ಇಂದು ಸಂಜೆ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಲಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ.
ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ನಾಯಕರೊಂದಿಗೆ ಅಂತಿಮ ಹಂತದ ಚರ್ಚೆ ನಡೆಸಲಿದ್ದಾರೆ.
ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಇಂದು ದೆಹಲಿಗೆ ತೆರಳಲಿದ್ದು, ನಾಳೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿರುವ ರಾಜ್ಯ ನಾಯಕರು ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಇತ್ತ ಸಂಪುಟ ವಿಸ್ತರಣೆ ಸುಳಿವು ಹಿನ್ನೆಲೆ ದೆಹಲಿಯತ್ತ ಸಚಿವ ಆಕಾಂಕ್ಷಿಗಳು ಮುಖ ಮಾಡಿದ್ದಾರೆ.
ದೆಹಲಿಯಲ್ಲಿ ನಡೆದಿದ್ದ ವಿದ್ಯಾರ್ಥಿಗಳ ಹೋರಾಟ ಅಂತ್ಯವಾದ ಹಿನ್ನೆಲೆ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕುರಿತಾದ ಚರ್ಚೆಗೆ ರಾಜ್ಯ ನಾಯಕರಿಗೆ ದೆಹಲಿಯಿಂದ ಬುಲಾವ್ ಬಂದಿದೆ.
ಇಂದು ರಾಜ್ಯ ನಾಯಕರು ದೆಹಲಿಗೆ ತೆರಳಲಿದ್ದು ಸೋಮವಾರ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ಚರ್ಚೆಗೆ ಸಮಯ ನಿಗದಿಯಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಬುಧವಾರ ರಾಜ್ಯ ಸಚಿವ ಸಂಪುಟ ಸಭೆ ವಿಸ್ತರಣೆ ಆಗಲಿದೆ.


