Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿಗಣತಿ ದೋಷಪೂರಿತ ವರದಿಯಾಗಿದೆ, ಲಿಂಗಾಯತರಿಗೆ ಅನ್ಯಾಯವಾಗಿದೆ : ತೋಂಟದಾರ್ಯ ಶ್ರೀ

Advertisement
ಗದಗ : ಸರ್ಕಾರದ ಜಾತಿಗಣತಿ ವರದಿ ಕರುನಾಡಲ್ಲಿ ಹೊಸ ರಾಜಕೀಯ ಕಿಚ್ಚನ್ನು ಹೊತ್ತಿಸಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಸ್ವಪಕ್ಷದವರು ಸೇರಿದಂತೆ ಅನೇಕರು ಬೆಂಕಿ ಉಗುಳುತ್ತಿದ್ದಾರೆ.

ಇದೀಗ ಗದಗದ ತೋಂಟದಾರ್ಯ ಮಠದ ಪೀಠಾಧಿಪತಿ ಡಾ. ಸಿದ್ದರಾಮ ಶ್ರೀಗಳು ಅಸಮಾಧಾನ ಹೊರಹಾಕಿದ್ದಾರೆ. ಜಾತಿಗಣತಿ ದೋಷಪೂರಿತ ವರದಿಯಾಗಿದೆ.ವರದಿಯಲ್ಲಿ ಲಿಂಗಾಯತರಿಗೆ ಅನ್ಯಾಯವಾಗಿದೆ ಎಂದು ಟೀಕಿಸಿದ್ದಾರೆ.

ಕರ್ನಾಟಕದಲ್ಲಿ ಲಿಂಗಾಯತರು ಬಹುಸಂಖ್ಯಾತರೆಂಬುದು ಎಲ್ಲರಿಗೂ ತಿಳಿದಿದೆ. ನಂತರ ಒಕ್ಕಲಿಗರು ಸೇರಿದಂತೆ ವಿವಿಧ ಜಾತಿಯವರು ಮುಂಚೂಣಿಯಲ್ಲಿದ್ದಾರೆ. ಆದರೆ, ಲಿಂಗಾಯತರ ಜನಸಂಖ್ಯೆ ಗಣನೀಯವಾಗಿ ಕಡಿಮೆ ಆಗಿದೆ.

ಲಿಂಗಾಯತರು ಮೀಸಲಾತಿಗಾಗಿ ಉಪಜಾತಿಯ ಹೆಸರನ್ನು ಬರೆಸಿರುವ ಕಾರಣ ಇರಬಹುದು. ದೋಷಪೂರಿತ ವರದಿಯನ್ನ ಸರ್ಕಾರ ಒಪ್ಪಿಕೊಳ್ಳುವುದರಿಂದ ಅನೇಕರಿಗೆ ಅನ್ಯಾಯವಾಗಬಹುದು ಎಂದಿದ್ದಾರೆ.

ಸರ್ಕಾರ ಇನ್ನೊಮ್ಮೆ ಸಮೀಕ್ಷೆ ನಡೆಸಬೇಕು. ಮತ್ತೊಮ್ಮೆ ಜಾತಿಗಣತಿ ವರದಿ ಸಿದ್ಧಪಡಿಸಬೇಕು ಎಂದು ಸ್ವಾಮೀಜಿ ಒತ್ತಾಯಿಸಿದರು. ಜಾತಿಗಣತಿಯ ವರದಿ ಸಾರ್ವಜನಿಕರಲ್ಲಿ ಸಂಶಯ ಹುಟ್ಟುಹಾಕಿದೆ.

ಸುಮಾರು ಏಳೆಂಟು ವರ್ಷಗಳ ಹಿಂದೆ ಜಾತಿಗಣತಿ ಸಿದ್ಧಪಡಿಸಿದ್ದಾರೆ. ಆ ಜಾತಿ ಜನಗಣತಿ ವರದಿ ಸಮರ್ಪಕವಾಗಿ ಇಲ್ಲ. ಆ ವರದಿಯನ್ನ ಸಿದ್ಧಪಡಿಸಿದ ವ್ಯಕ್ತಿಗಳು ಕರ್ನಾಟಕ ಪ್ರತಿಯೊಬ್ಬ ವ್ಯಕ್ತಿಯನ್ನು ಸಂಪರ್ಕಿಸಿಲ್ಲವೆಂಬ ಆರೋಪವಿದೆ ಎಂದು ಹಳಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ