
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್ ಮುರಳಿ ಅವರು ಅಂಬೇಡ್ಕರ್ ಅವರ ಬೆಳವಣಿಗೆ ಹಾಗೂ ಎಲ್ಲ ಸಮಾಜದ ಏಳಿಗೆಗೆ ಅಪಾರ ಕೊಡುಗೆಗಳು, ಎಲ್ಲ ಮಹಿಳೆಯರಿಗೆ ಹಕ್ಕುಗಳನ್ನು ನೀಡಿದರು ಹಾಗೂ ಅವರು ವಿದ್ಯಾಭ್ಯಾಸಕ್ಕೆ ಹೆಚ್ಚು ಮಹತ್ವವನ್ನು ನೀಡಿದ್ದಾರೆ ಎಂದರು.

ವಿದ್ಯಾರ್ಥಿಗಳು ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನದ ಬಗ್ಗೆ ಭಾಷಣ ಮಾಡಿದರು. ಸಮಾಜದ ಮುಖಂಡರಿಗೂ ಮತ್ತು ತಾಲೂಕ ಪತ್ರಕರ್ತರಿಗೆ ಸನ್ಮಾನ ಮಾಡಲಾಯಿತು.
ಈ ಸಂಧರ್ಭದಲ್ಲಿ ತಾಲೂಕ ಪಂಚಾಯತ್ ಅಧಿಕಾರಿ ಪರಶುರಾಮ್ ಸಾವಂತ್, ಗ್ಯಾರಂಟಿ ಯೋಜನೆಯ ತಾಲೂಕ ಅಧ್ಯಕ್ಷ ಬಸವರಾಜ್ ಬಾವ್ಕರ, ಪಪಂ ಮುಖ್ಯ ಅಧಿಕಾರಿ ಚಂದ್ರಶೇಖರ್ ಬಿ, ಸಮಾಜ ಕಲ್ಯಾಣ ಅಧಿಕಾರಿ ಅನುಷಾ ಹಿರೇಮಠ, ಪೊಲೀಸ್ ಇನ್ಸೆಕ್ಟರ್ ಶ್ರೀಶೈಲ್ ಕೌಜಲಗಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮುಖಂಡರುಗಳು ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.
ವರದಿ : ನಿತೀಶಗೌಡ ತಡಸ ಪಾಟೀಲ್

