Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ‍್ಯೋತ್ಸವ ಆಚರಣೆ

Advertisement
ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ 79 ನೇ ಸ್ವಾತಂತ್ರ‍್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಅಚರಿಸಲಾಯಿತು. ಧ್ವಜಾರೋಹಣದ ನಂತರ ಗ್ರಾಮದಲ್ಲಿ ನಡೆದ ಪ್ರಭಾತಪೇರಿಯಲ್ಲಿ ವಿವಿಧ ಸ್ವಾತಂತ್ರ‍್ಯ ಹೋರಾಟಗಾರರ ವೇಷದಲ್ಲಿನ ಮಕ್ಕಳು ಎಲ್ಲರ ಗಮನ ಸೆಳೆದರು. ಗ್ರಾಮದ ಮಾಜಿ ಯೋಧರಾದ ವಿ.ಬಿ ಬಡಿಗೇರ, ಅರ್ಜುನ ನಿಂಬಾಳ್ಕರ, ಗಂಗಪ್ಪ ಅರವಟಗಿ, ಹನಮಂತಪ್ಪ ಯರಗೊಪ್ಪ ಮತ್ತು ಹಾಲಿ ಸೈನಿಕರಾದ ಗುರುಶಾಂತಯ್ಯ ಕುಲಕರ್ಣಿ, ಮಲಿಕ್ ಜಾನ್ ವಕ್ಕುಂದ, ಅದೃಶ ಕಂಬಳಿ ಭಾಗಿಯಾಗಿದ್ದರು.



ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮುಖ್ಯಶಿಕ್ಷಕರಾದ ಎನ್.ಆರ್. ಠಕ್ಕಾಯಿ ಮಾತನಾಡಿ ಮಕ್ಕಳು ಉತ್ತಮ ಶಿಕ್ಷಣ ಪಡೆದು ಶ್ರೇಷ್ಠ ಸಾಧನೆ ಮಾಡಿ ದೇಶದ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಬೇಕು ಎಂದರು. ತಮ್ಮ ಜೀವದ ಹಂಗು ತೊರೆದು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸದಾ ಸ್ಮರಿಸಬೇಕು ಎಂದು ಅವರು ಹೇಳಿದರು. ಎಸ್.ಡಿ.ಎಂ.ಸಿ ಸದಸ್ಯರಾದ ರಾಮಲಿಂಗಪ್ಪ ಮೆಕ್ಕೇದ ಮಾತನಾಡಿ ನಮ್ಮ ದೇಶದ ಬಗ್ಗೆ ನಮಗೆಲ್ಲ ಅಪಾರ ಅಭಿಮಾನ, ಹೆಮ್ಮೆ ಇರಬೇಕು ಎಂದರು. ಪರಶುರಾಮ ಅಳಗೋಡಿ ಮಾತನಾಡಿ ಅನೇಕ ಹೋರಾಟಗಾರರ ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ ಎಂದು ಅಭಿಪ್ರಾಯಪಟ್ಟರು.ಭಾಷಣ ಹಾಗೂ ದೇಶಭಕ್ತಿ ಗೀತೆಗಳ ಮೂಲಕ ವಿದ್ಯಾರ್ಥಿಗಳು ಭವ್ಯ ಭಾರತದ ಹಿರಿಮೆಯನ್ನು ಕೊಂಡಾಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ವಿನಾಯಕ ಬಡಿಗೇರ, ಉಪಾಧ್ಯಕ್ಷ ರಮೇಶ ಸೂರ್ಯವಂಶಿ, ಪದಾಧಿಕಾರಿಗಳಾದ ವಿಠ್ಠಲ ಕಂಬಳಿ, ನಾಗಪ್ಪ ಬೂದಿಹಾಳ, ಯಲ್ಲಪ್ಪ ಕುರಿ, ಮಾಜಿ ತಾ.ಪಂ.ಸದಸ್ಯರಾದ ಜನಕರಾಜ ಪಾಟೀಲ, ಗ್ರಾಮಸ್ಥರಾದ ತಾನಾಜಿ ಸೂರ್ಯವಂಶಿ, ಮಲ್ಲಿಕಾರ್ಜುನ ಜೇಡರ, ಶಿಕ್ಷಕರಾದ ಜಗದೀಶ ನರಿ, ಪ್ರವೀಣ ಗುರುನಗೌಡರ, ಶಿವಾನಂದ ಬಳಿಗಾರ, ಹೇಮಲತಾ ಪುರಾಣಿಕ, ವೀರೇಂದ್ರ ಪಾಟೀಲ, ಮಂಜುಳಾ ಕಾಳಿ, ಸಂತೋಷ ಸಾಳುಂಕೆ, ಜ್ಯೋತಿ ಅಳಗೋಡಿ, ಗಂಗವ್ವ ಅಳಗೋಡಿ, ಮಹಾದೇವಿ ಸೊಗಲದ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಗ್ರಾಮದ ಹಿರಿಯರು, ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಾನಿಕಾ ಕುಲಕರ್ಣಿ ನಿರೂಪಿಸಿದರು. ಭಾಗ್ಯಶ್ರೀ ಬಡಿಗೇರ ಸ್ವಾಗತಿಸಿದರು. ಶ್ರೇಯಾ ಸೂರ್ಯವಂಶಿ ವಂದಿಸಿದರು.

ವರದಿ: ದುಂಡಪ್ಪ ಹೂಲಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ