Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಂದವಾಡಗಿ ಶಾಲೆಯಲ್ಲಿ ಸಂತ ಕನಕದಾಸರ ಜಯಂತಿ ಆಚರಣೆ

Advertisement
ಇಲಕಲ್:- ಹುನಗುಂದ ಹಾಗೂ ಇಲಕಲ್ ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ಸಂತ, ಶ್ರೇಷ್ಠ ಕವಿ, ದಾರ್ಶನಿಕರು ಭಕ್ತ ಕನಕದಾಸರ ಜಯಂತಿಯನ್ನು ಶಾಲೆಯ ವಿದ್ಯಾರ್ಥಿನಿಯರೊಂದಿಗೆ ಅದ್ದೂರಿಯಾಗಿ ಆಚರಿಸಲಾಯಿತು. ಭಕ್ತ ಕನಕದಾಸರ ತತ್ವ, ಆದರ್ಶ ಪರಿಪಾಲನೆ ನಮಗೆಲ್ಲರಿಗೂ ಬಹುಮುಖ್ಯವಾಗಿದೆ. ಕನಕದಾಸರು ಸಾಮಾಜಿಕ ಚಿಂತನೆಯ ಹರಿಕಾರರು, ಸರಳ ಬದುಕಿನಲ್ಲಿ ಶ್ರೀಮಂತಿಕೆ ವ್ಯಕ್ತಿತ್ವ ಬೆಳೆಸಿಕೊಂಡವರು ಎಂದು ಪ್ರಾಸ್ತಾವಿಕವಾಗಿ ಶಾಲೆಯ ಸಹ ಶಿಕ್ಷಕರಾದ ಡಾ ವಿಶ್ವನಾಥ ತೋಟಿ ಮಾತನಾಡಿದರು. ಕುಲ ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಬಲ್ಲಿರಾ ಎಂಬ ಜಾತಿ, ವರ್ಗ, ಪಂಗಡಗಳ ಬಗ್ಗೆ ಪ್ರಶ್ನೆ ಹಾಕಿ, ಸಮಾಜದಲ್ಲಿ ಸಮಾನತೆ ಬಿತ್ತಿದವರು ಸಂತ ಕನಕದಾಸರು.

ಸರಳತೆ, ಭಕ್ತಿಯನ್ನು ತಮ್ಮ ಕೀರ್ತನೆಯ ಮೂಲಕ ಸಮಾಜವನ್ನು ತಿದ್ದುವಲ್ಲಿ ಬದುಕು ಸಾಗಿಸಿದರು ಎಂದು ಸಹ ಶಿಕ್ಷಕರಾದ ಬಸವರಾಜ ಬಲಕುಂದಿ ರವರು ಮಾತನಾಡಿದರು. ಶಾಲೆಯ ವಿದ್ಯಾರ್ಥಿನಿಯರು ಸಂತ ಕನಕದಾಸರ ಬಾಲ್ಯ, ವ್ಯಕ್ತಿತ್ವ, ಆದರ್ಶ ಬದುಕಿನ ಕುರಿತು ಮಾತನಾಡಿದರು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಪಾಲಕರು, ಪೋಷಕರು, ಶಾಲೆಯ ಮುಖ್ಯ ಗುರುಮಾತೆ ಶ್ರೀಮತಿ ವಿ ಬಿ ಕುಂಬಾರ, ಸಹ ಶಿಕ್ಷಕಿಯರಾದ ಶ್ರೀಮತಿ ಜ್ಯೋತಿ, ಶ್ರೀಮತಿ ಜಿ ಆರ್ ನದಾಫ್, ಸಹ ಶಿಕ್ಷಕರಾದ ಬಸವರಾಜ ಬಲಕುಂದಿ, ಡಾ. ವಿಶ್ವನಾಥ ತೋಟಿ, ಶ್ರೀ ಚಂದ್ರಶೇಖರ ಹುತಗಣ್ಣ, ಸಹ ಶಿಕ್ಷಕಿ ಕುಮಾರಿ ಅಶ್ವಿನಿ ಕಪ್ಪರದ, ಶಿಕ್ಷಣ ಪ್ರೇಮಿ ಗೋಪಿ ಶಿಂಧೆ, ಇನ್ನಿತರರು ಸಂತ ಕನಕದಾಸರ ಜಯಂತಿಗೆ ಶುಭಾಶಯ ಕೋರಿದರು. ಶಾಲಾ ಮಂತ್ರಿ ಮಂಡಲ ನಿರೂಪಸಿ, ಸ್ವಾಗತಿಸಿ, ವಂದಿಸಿದರು.

ವರದಿ :-ದಾವಲ್ ಶೇಡಂ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ