Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಂದವಾಡಗಿ ಶಾಲೆಯಲ್ಲಿ ಸಂತ ಕನಕದಾಸರ ಜಯಂತಿ ಆಚರಣೆ

Advertisement
ಇಲಕಲ್:- ಹುನಗುಂದ ಹಾಗೂ ಇಲಕಲ್ ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ಸಂತ, ಶ್ರೇಷ್ಠ ಕವಿ, ದಾರ್ಶನಿಕರು ಭಕ್ತ ಕನಕದಾಸರ ಜಯಂತಿಯನ್ನು ಶಾಲೆಯ ವಿದ್ಯಾರ್ಥಿನಿಯರೊಂದಿಗೆ ಅದ್ದೂರಿಯಾಗಿ ಆಚರಿಸಲಾಯಿತು. ಭಕ್ತ ಕನಕದಾಸರ ತತ್ವ, ಆದರ್ಶ ಪರಿಪಾಲನೆ ನಮಗೆಲ್ಲರಿಗೂ ಬಹುಮುಖ್ಯವಾಗಿದೆ. ಕನಕದಾಸರು ಸಾಮಾಜಿಕ ಚಿಂತನೆಯ ಹರಿಕಾರರು, ಸರಳ ಬದುಕಿನಲ್ಲಿ ಶ್ರೀಮಂತಿಕೆ ವ್ಯಕ್ತಿತ್ವ ಬೆಳೆಸಿಕೊಂಡವರು ಎಂದು ಪ್ರಾಸ್ತಾವಿಕವಾಗಿ ಶಾಲೆಯ ಸಹ ಶಿಕ್ಷಕರಾದ ಡಾ ವಿಶ್ವನಾಥ ತೋಟಿ ಮಾತನಾಡಿದರು. ಕುಲ ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಬಲ್ಲಿರಾ ಎಂಬ ಜಾತಿ, ವರ್ಗ, ಪಂಗಡಗಳ ಬಗ್ಗೆ ಪ್ರಶ್ನೆ ಹಾಕಿ, ಸಮಾಜದಲ್ಲಿ ಸಮಾನತೆ ಬಿತ್ತಿದವರು ಸಂತ ಕನಕದಾಸರು.

ಸರಳತೆ, ಭಕ್ತಿಯನ್ನು ತಮ್ಮ ಕೀರ್ತನೆಯ ಮೂಲಕ ಸಮಾಜವನ್ನು ತಿದ್ದುವಲ್ಲಿ ಬದುಕು ಸಾಗಿಸಿದರು ಎಂದು ಸಹ ಶಿಕ್ಷಕರಾದ ಬಸವರಾಜ ಬಲಕುಂದಿ ರವರು ಮಾತನಾಡಿದರು. ಶಾಲೆಯ ವಿದ್ಯಾರ್ಥಿನಿಯರು ಸಂತ ಕನಕದಾಸರ ಬಾಲ್ಯ, ವ್ಯಕ್ತಿತ್ವ, ಆದರ್ಶ ಬದುಕಿನ ಕುರಿತು ಮಾತನಾಡಿದರು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಪಾಲಕರು, ಪೋಷಕರು, ಶಾಲೆಯ ಮುಖ್ಯ ಗುರುಮಾತೆ ಶ್ರೀಮತಿ ವಿ ಬಿ ಕುಂಬಾರ, ಸಹ ಶಿಕ್ಷಕಿಯರಾದ ಶ್ರೀಮತಿ ಜ್ಯೋತಿ, ಶ್ರೀಮತಿ ಜಿ ಆರ್ ನದಾಫ್, ಸಹ ಶಿಕ್ಷಕರಾದ ಬಸವರಾಜ ಬಲಕುಂದಿ, ಡಾ. ವಿಶ್ವನಾಥ ತೋಟಿ, ಶ್ರೀ ಚಂದ್ರಶೇಖರ ಹುತಗಣ್ಣ, ಸಹ ಶಿಕ್ಷಕಿ ಕುಮಾರಿ ಅಶ್ವಿನಿ ಕಪ್ಪರದ, ಶಿಕ್ಷಣ ಪ್ರೇಮಿ ಗೋಪಿ ಶಿಂಧೆ, ಇನ್ನಿತರರು ಸಂತ ಕನಕದಾಸರ ಜಯಂತಿಗೆ ಶುಭಾಶಯ ಕೋರಿದರು. ಶಾಲಾ ಮಂತ್ರಿ ಮಂಡಲ ನಿರೂಪಸಿ, ಸ್ವಾಗತಿಸಿ, ವಂದಿಸಿದರು.

ವರದಿ :-ದಾವಲ್ ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ