LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗಾಜರ್‌ಕೋಟ್ ಗ್ರಾಮದಲ್ಲಿ ಧಾರ್ಮಿಕ ಸ್ಥಳಗಳ ಧ್ವಂಸ ಪ್ರಯತ್ನ : ಕಠಿಣ ಕ್ರಮಕ್ಕೆ ಕೆ ಬಿ ವಾಸು ಅಗ್ರಹ

Advertisement
ಗುರುಮಠಕಲ್ : ಗುರುಮಾಠಕಲ್ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗಜರಾಕೋಟ ಗ್ರಾಮದಲ್ಲಿ ಶತಮಾನದ ಹಳೆಯ ಖಬರ್‌ಸ್ತಾನ್ ಹಾಗೂ ದರ್ಗಾ ಧಾರ್ಮಿಕ ಸ್ಮಾರಕವನ್ನು ಧ್ವಂಸಗೊಳಿಸಲು ಯತ್ನಿಸಿರುವ ಗಂಭೀರ ಘಟನೆ ವರದಿಯಾಗಿದೆ.

ರವಿವಾರದಂದು ಚಾಂದ್ ಸಾಬ್ ಎಂಬ ವ್ಯಕ್ತಿ,ರಾಂಪುರ ಗ್ರಾಮದ ಜೆಸಿಪಿ ಬಳಸಿ, ಧಾರ್ಮಿಕ ಸ್ಥಳವನ್ನು ಕೆಡವಲು ಯತ್ನಿಸಿದ್ದಾನೆ ಎಂದು ಸ್ಥಳೀಯ ಮುಸ್ಲಿಂ ಸಮುದಾಯದವರು ತಿಳಿಸಿದ್ದಾರೆ.

ಈ ಘಟನೆಯು ಗ್ರಾಮದಲ್ಲಿ ಶಾಂತಿ-ಸೌಹಾರ್ದ್ಯಕ್ಕೆ ಭಂಗ ಉಂಟುಮಾಡುವ ಕೃತ್ಯವಾಗಿದೆ. ಸ್ಥಳೀಯ ಮುಸ್ಲಿಂ ಸಮುದಾಯದ ಜನತೆ ತಕ್ಷಣ ತಡೆಹಿಡಿದ ಕಾರಣದಿಂದಾಗಿ, ಆಕ್ರಮಣಕಾರಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಈಗಾಗಲೇ ಗ್ರಾಮಸ್ಥರು ಮತ್ತು ಮುಸ್ಲಿಂ ಸಮುದಾಯದ ಮುಖಂಡರು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಶೀಘ್ರ ಕ್ರಮದ ಕುರಿತ ಮನವಿ ಸಲ್ಲಿಸಿದ್ದಾರೆ.

ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ರಾಜ್ಯ ಉಪಾಧ್ಯಕ್ಷರು ಶ್ರೀ ಕೆ.ಬಿ. ವಾಸು ಅವರು ಕೂಡ ಈ ಪ್ರಕರಣವನ್ನು ಖಂಡಿಸಿ, ಜವಾಬ್ದಾರಿ ವಹಿಸುವ ಅಧಿಕಾರಿಗಳಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಧಾರ್ಮಿಕ ಸ್ಥಳಗಳ ರಕ್ಷಣೆ ಹಾಗೂ ಶಾಂತಿ-ಸೌಹಾರ್ದ್ಯ ಕಾಯ್ದುಕೊಳ್ಳಲು ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕೆಂದು ಸಾರ್ವಜನಿಕವಾಗಿ ಮನವಿ ಮಾಡಿದರು.

ವರದಿ : ರವಿ ಬುರನೋಳ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ